ಬ್ರೇಕಿಂಗ್ ನ್ಯೂಸ್
02-05-21 01:09 pm Headline Karnataka News Network ದೇಶ - ವಿದೇಶ
Photo credits : NDTV
ಚೆನ್ನೈ,ಮೇ 2: ತಮಿಳುನಾಡು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಮತ ಎಣಿಕೆ ಆರಂಭವಾಗಿ ಮೂರು ಗಂಟೆ ಕಳೆದಾಗ ಡಿಎಂಕೆ 137 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.
ಅದೇ ವೇಳೆ ಆಡಳಿತರೂಢ ಎಐಎಡಿಎಂಕೆ 95 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. 234 ಸೀಟುಗಳಿರುವ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಬೇಕಾದರೆ ರಾಜಕೀಯ ಪಕ್ಷಗಳಿಗೆ 118 ಸೀಟುಗಳ ಅಗತ್ಯವಿದೆ. 2011ರ ವಿಧಾನಸಭಾ ಚುನಾವಣೆ ಗೆದ್ದಿದ್ದ ಎಐಎಡಿಎಂಕೆ ಈ ಬಾರಿಯೂ ಅಧಿಕಾರ ಮುಂದುವರಿಸುವ ನಿರೀಕ್ಷೆ ಹೊಂದಿದ್ದು, ಡಿಎಂಕೆ ಈ ಬಾರಿ ಗದ್ದುಗೆಗೇರುವ ಮಹತ್ವಾಕಾಂಕ್ಷೆಯೊಂದಿಗೆ ಚುನಾವಣೆ ಸ್ಪರ್ಧಿಸಿದೆ. ತಮಿಳುನಾಡಿನ ಹಿರಿಯ ರಾಜಕಾರಣಿಗಳಾದ ಎಂ.ಕರುಣಾನಿಧಿ ಮತ್ತು ಜೆ. ಜಯಲಲಿತಾ ಅವರ ಮರಣದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.
ಎಐಎಡಿಎಂಕೆ ನೇತೃತ್ವದ ಎನ್ಡಿಎ ಮತ್ತು ಡಿಎಂಕೆ ನೇತೃತ್ವದ ಸೆಕ್ಯುಲರ್ ಪ್ರೊಗ್ರೆಸ್ಸಿವ್ ಅಲಯನ್ಸ್ ಶೇ 70-80 ಮತಗಳ ಬೆಂಬಲ ಹೊಂದಿದೆ. ಇನ್ನುಳಿದ ಮತಗಳು ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೇಟ್ರ ಕಳಗಂ, ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಸಿಗುವುದಾಗಿ ಅಂದಾಜಿಸಲಾಗಿದೆ. ಏಪ್ರಿಲ 6ರಂದು ನಡೆದ ಚುನಾವಣೆಯಲ್ಲಿ ಶೇ72. 81 ಮತದಾನವಾಗಿತ್ತು.
ಡಿಎಂಕೆ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಮತ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿದ್ದು ಆರಂಭಿಕ ಮತ ಎಣಿಕೆಯಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದ ಸುದ್ದಿ ತಿಳಿದು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಐದು ಸೀಟುಗಳಲ್ಲಿ ಬಿಜೆಪಿ ಮುನ್ನಡೆ
ತಿರುನಲ್ವೇಲಿ, ಧಾರಾಪುರಂ , ಹಾರ್ಬರ್, ನೀಲಗಿರಿ , ಕನ್ಯಾಕುಮಾರಿ ಈ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಎಂ.ಕೆ .ಸ್ಟಾಲಿನ್ ಮುನ್ನಡೆ;
ಕೊಲತ್ತೂರ್ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ನಾಯಕ ಎಂ.ಕೆ,ಸ್ಟಾಲಿನ್ 1,700 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಎಐಎಡಿಎಂಕೆ ಪಕ್ಷದ ಆದಿರಾಜಾರಾಂ ಪ್ರತಿಸ್ಪರ್ಧಿಯಾಗಿದ್ದಾರೆ
ಕಮಲ್ ಹಾಸನ್ ಮುನ್ನಡೆ;
ಕೊಯಮತ್ತೂರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್ ಮುನ್ನಡೆ ಸಾಧಿಸಿದ್ದಾರೆ.
In Tamil Nadu, the DMK is set to form government but their performance was not as exit polls predicted. According to current leads, the DMK+ alliance is leading in 137 seats.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm