ಬ್ರೇಕಿಂಗ್ ನ್ಯೂಸ್
03-05-21 10:07 am Headline Karnataka News Network ದೇಶ - ವಿದೇಶ
Photo credits : Indianexpress
ಬೆಂಗಳೂರು, ಮೇ 3: ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ ಗಟ್ಟಿತನ ನಮಗೆ ಮಾದರಿ, ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಮನದಾಳ ಹೇಳಿಕೊಂಡಿರುವ ಕುಮಾರಸ್ವಾಮಿ, ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ ಎಂದಿದ್ದಾರೆ.
ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ.
"ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿ. ಜೆಡಿಎಸ್ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲೂ ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ.
ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ. ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತು ಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿ ಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂದೂ ಅವರು ಹೇಳಿದ್ದಾರೆ.
I want to repeat that the toughness of Mamata Banerjee who rose against the immoral experiments of power is going to be our model and the patience of DMK leaders who managed to move forward despite adverse political situation will be a lesson for us.
— H D Kumaraswamy (@hd_kumaraswamy) May 2, 2021
10/12
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm