ಬ್ರೇಕಿಂಗ್ ನ್ಯೂಸ್
03-05-21 11:34 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 3: ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಲ್ಲಿ ಲಾಕ್ಡೌನ್ ಘೋಷಿಸಿದ ಎರಡು ವಾರಗಳ ಬಳಿಕ, ಪರೀಕ್ಷೆಗೆ ಒಳಪಟ್ಟವರ ಪೈಕಿ ಸೋಂಕು ಪತ್ತೆಯಾಗಿರುವ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ಆದರೂ, ಉಸಿರಾಟದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಆಮ್ಲಜನಕ ದೊರೆಯದೆ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ ಎಡತಾಕುವುದು ಮುಂದುವರಿದಿದೆ.
ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ 71,997 ಜನರ ಪೈಕಿ 20,394 (ಶೇ 28.33) ಜನರಲ್ಲಿ ಸೋಂಕು ದೃಢಪಟ್ಟಿದೆ.
ಕಳೆದ 15 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆಗೆ ಒಳಪಟ್ಟವರಲ್ಲಿ ಸೋಂಕಿಗೆ ಒಳಗಾದವರ ಪ್ರಮಾಣ ಶೇ 30ಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿದಿದೆ. ಶನಿವಾರ ಶೇ 31.61ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿತ್ತು.
24,444 ಜನ ಗುಣಮುಖರಾಗಿದ್ದಾರೆ. ಈ ಸಂಖ್ಯೆಯು ಸೋಂಕಿತರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವುದು ಸ್ವಲ್ಪ ಮಟ್ಟಿನ ಸಮಾಧಾನಕ್ಕೆ ಕಾರಣವಾಗಿದೆ. ಶನಿವಾರದಿಂದ ಹೊಸದಾಗಿ ಸೊಂಕಿಗೆ ಒಳಗಾಗುತ್ತಿರುವವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವುದೂ ಆತಂಕ ತಗ್ಗಲು ಕಾರಣವಾಗಿದೆ.
ಆದರೆ, ಇದೇ ಅವಧಿಯಲ್ಲಿ ಸಾವಿನ ಪ್ರಮಾಣದಲ್ಲಿ ಸಾಕಷ್ಟು ಪ್ರಮಾಣದ ಸುಧಾರಣೆ ಸಾಧ್ಯವಾಗದೆ, ಒಟ್ಟು 407 ಜನ ಮೃತಪಟ್ಟಿದ್ದಾರೆ. ನಗರದಲ್ಲಿ ಇದುವರೆಗೆ ಕೊರೊನಾಗೆ ಜೀವ ಕಳೆದುಕೊಂಡವರ ಸಂಖ್ಯೆ 16,966ಕ್ಕೆ ತಲುಪಿದೆ.
ಶನಿವಾರ ಒಂದು ಲಕ್ಷಕ್ಕೆ ಸಮೀಪಿಸಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯು 92,290ಕ್ಕೆ ಇಳಿದಿದ್ದರೂ, ಆಸ್ಪತ್ರೆಗಳಲ್ಲಿ ಹಾಸಿಗೆಯ ಕೊರತೆ ಮುಂದುವರಿದಿದೆ.
The Capital on Sunday recorded 407 deaths and 20,394 COVID-19 cases, along with 24,444 recoveries. A health bulletin released by the Delhi government stated that 71,997 tests were conducted and a positivity rate of 28.33% was recorded.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm