ಬ್ರೇಕಿಂಗ್ ನ್ಯೂಸ್
26-08-20 05:46 pm Headline Karnataka News Network ದೇಶ - ವಿದೇಶ
ಪ್ಯೊಂಗ್ಯಾಂಗ್, ಆಗಸ್ಟ್ 26: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್-ಉನ್ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಹೇಳಿದ ಕೆಲವೇ ದಿನಗಳಲ್ಲಿ ಉತ್ತರ ಕೊರಿಯಾದ ಆಡಳಿತ ಅವರ ಚಿತ್ರಗಳನ್ನು ಬಿಡುಗಡೆಗೊಳಿಸಿದೆ. ತಮ್ಮ ವರ್ಕರ್ಸ್ ಪಾರ್ಟಿಯ ಉನ್ನತ ಸಭೆಯೊಂದರಲ್ಲಿ ಕಿಮ್ ಜೊಂಗ್ ಉನ್ ಭಾಗವಹಿಸಿದ ಚಿತ್ರಗಳು ಇವಾಗಿವೆ ಎಂದು ಅಲ್ಲಿನ ಸರಕಾರಿ ನಿಯಂತ್ರಿತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜನ್ಸಿ ತಿಳಿಸಿದೆ.
ಸಭೆಯಲ್ಲಿ ಅವರು ಕೊರೋನವೈರಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಚಂಡಮಾರುತ ಸಂಬಂಧ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಎಂದು ಆ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಈ ಚಿತ್ರಗಳನ್ನು ಯಾವಾಗ ತೆಗೆಯಲಾಗಿದೆ ಎಂಬ ಕುರಿತು ಸ್ಪಷ್ಟತೆಯಿಲ್ಲ.
ಕಿಮ್ ಅವರು ಎಪ್ರಿಲ್ ತಿಂಗಳಿನಿಂದ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಕಿಮ್ ಡೇ-ಜುಂಗ್ ಅವರ ಮಾಜಿ ಸಹಾಯಕ ಚಂಗ್ ಸೊಂಗ್ ಮಿನ್ ಅವರು ಹೇಳಿದ ಎರಡೇ ದಿನದಲ್ಲಿ ಈ ಚಿತ್ರಗಳು ಬಿಡುಗಡೆಗೊಂಡಿವೆ.
ಆದರೆ ಚಂಗ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ``ಕಿಮ್ ಕೋಮಾದಲ್ಲಿದ್ದಾರೆ ಆದರೆ ಇನ್ನೂ ಬದುಕಿದ್ದಾರೆ, ನಕಲಿ ಚಿತ್ರಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ, ಅವರಿಗೆ ಯಾರು ಉತ್ತರಾಧಿಕಾರಿ ಎಂಬ ಕುರಿತು ಸ್ಪಷ್ಟತೆಯಿಲ್ಲದೇ ಇರುವುದರಿಂದ ಹಾಗೂ ಹೆಚ್ಚು ಕಾಲ ಈ ರೀತಿ ರಹಸ್ಯ ಕಾಪಾಡಲು ಸಾಧ್ಯವಿಲ್ಲದೇ ಇರುವುದರಿಂದ ಅವರ ಸೋದರಿ ಕಿಮ್-ಯೊ-ಜುಂಗ್ ಅವರನ್ನು ಪ್ರಧಾನ ವೇದಿಕೆಗೆ ತರುವ ಯತ್ನಗಳು ನಡೆಯುತ್ತಿವೆ,'' ಎಂದು ಬರೆದಿದ್ದರು.
ಮೂಲಗಳ ಪ್ರಕಾರ ಕಿಮ್ ಜೊಂಗ್-ಉನ್ ಅವರು ತಮ್ಮ ಬಾಡಿ-ಡಬಲ್ ಬಳಸುತ್ತಿರಬಹುದು ಏಕೆಂದರೆ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಹಲವು ಚಿತ್ರಗಳಿಗೂ ಅವರ ಮೂಲ ಚಿತ್ರಗಳಿಗೂ ವ್ಯತ್ಯಾಸ ಕಾಣುತ್ತಿವೆ ಎಂದು ಹೇಳಲಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm