ಬ್ರೇಕಿಂಗ್ ನ್ಯೂಸ್
04-05-21 04:10 pm Headline Karnataka News Network ದೇಶ - ವಿದೇಶ
Photo credits : 9news
ಮೆಕ್ಸಿಕೊ, ಮೇ 4 : ಜನನಿಬಿಡ ರಸ್ತೆಯ ಮೇಲೆ ಮೆಟ್ರೋ ಮೇಲ್ಸೇತುವೆ ಕುಸಿದು 23 ಮಂದಿ ಮೃತಪಟ್ಟು 700ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನಡೆದಿದೆ.


ಸೋಮವಾರ ರಾತ್ರಿ ಮೆಟ್ರೋ ರೈಲು ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಈ ದುರಂತ ನಡೆದಿದ್ದು, ಮೇಲ್ಸೇತುವೆ ಕುಸಿಯುತ್ತಿದ್ದಂತೆ ರೈಲು ಕೆಳಗೆ ಬಿದ್ದಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಲವರನ್ನು ಕಾಪಾಡಿದ್ದಾರೆ. ಹಾಗೇ, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನೂ ಹೊರತೆಗೆದಿದ್ದಾರೆ. ಮೊದಲು ಸುಮಾರು 13 ಮೃತದೇಹಗಳು ಸಿಕ್ಕಿದ್ದವು. ಇದೀಗ ಸಾವಿನ ಸಂಖ್ಯೆ ಹೆಚ್ಚಾಗಿದೆ.


ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ.

ಇನ್ನು ರಕ್ಷಣಾ ಕಾರ್ಯಾಚರಣೆಯೂ ಸಹ ಕಷ್ಟಕರವಾಗಿಯೇ ಇತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ ಮೆಕ್ಸಿಕೋ ಸಿಟಿಯ ಮೇಯರ್ ಕ್ಲೌಡಿಯಾ ಶೀನ್ಬಾಮ್, ಮೇಲ್ಸೇತುವ ಕುಸಿದಾಗ ರೈಲು ಅರ್ಧ ಕುಸಿದಿದೆ. ಹಾಗಾಗಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಯಿತು. ನಂತರ ಸ್ಥಳಕ್ಕೆ ಕ್ರೇನ್ ಕಳಿಸಲಾಯಿತು ಎಂದು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಕೂಡ ತುಂಬ ಗಂಭೀರವಾಗಿದೆ. ಕೆಲವರಿಗೆ ಸರ್ಜರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.
at least 13 dead and 70 injured after a metro train cars collapsed from overpass in mexico city #MetroCDMX #CDMX pic.twitter.com/EvjTUt2BVx
— QCON (@sam23858402) May 4, 2021
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm