ಬ್ರೇಕಿಂಗ್ ನ್ಯೂಸ್
05-05-21 05:30 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 5: ಕೊರೊನಾ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸುವಲ್ಲಿ ಕೇರಳದ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರ ಪರಿಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಕೊರೊನಾ ಲಸಿಕೆಗಳು ಅನಗತ್ಯವಾಗಿ ವ್ಯರ್ಥವಾಗುವುದನ್ನು ತಪ್ಪಿಸುವುದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ತುಂಬಿದಂತೆ ಎಂದು ಹೇಳಿದ್ದಾರೆ.

ತಮ್ಮ ರಾಜ್ಯದಲ್ಲಿ ಕೊರೊನಾ ಲಸಿಕೆಗಳನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದರ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಧಾನಿ ಪ್ರತಿಕ್ರಿಯಿಸಿ, ಲಸಿಕೆ ವಿಚಾರದಲ್ಲಿ ಕೇರಳ ಸರ್ಕಾರ ನಡೆ ಮಾದರಿ ಎಂದು ಶ್ಲಾಘಿಸಿದ್ದಾರೆ.
ಕೇರಳಕ್ಕೆ ಕೇಂದ್ರ ಸರ್ಕಾರದಿಂದ 73,38,806 ಡೋಸ್ ಲಸಿಕೆಗಳು ಲಭ್ಯವಾಗಿವೆ. ಒಬ್ಬರಿಗೆ ಲಸಿಕೆ ನೀಡಿದ ನಂತರ ಉಳಿಯುವ, ವ್ಯರ್ಥವಾಗಬಹುದಾದ ಲಸಿಕೆಯನ್ನು ಬಳಸಿಕೊಂಡು ನಾವು 74,26,164 ಡೋಸ್ ಲಸಿಕೆ ನೀಡಿದ್ದೇವೆ. ನಮ್ಮ ಆರೋಗ್ಯ ಕಾರ್ಯಕರ್ತರು, ದಾದಿಯರು ಈ ನಿಟ್ಟಿನಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಮೆಚ್ಚುಗೆಗೆ ಅವರು ಅರ್ಹರು ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು.

ಲಸಿಕೆಯು ವ್ಯರ್ಥವಾಗುವುದನ್ನು ತಪ್ಪಿಸುವ ಮೂಲಕ ನಮ್ಮ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರು ಮಾದರಿ ಎನಿಸಿಕೊಂಡಿದ್ದಾರೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.
ಲಸಿಕೆ ವ್ಯರ್ಥ ಮಾಡುವ ವಿಚಾರದಲ್ಲಿ ಕೇರಳದ್ದು ಅತಿ ಕಡಿಮೆ ಪ್ರಮಾಣವಿದೆ. ಮೇಘಾಲಯ, ನಾಗಾಲ್ಯಾಂಡ್, ಬಿಹಾರ್, ಪಂಜಾಬ್, ದಾದ್ರಾ, ನಗರ್ ಹವೇಲಿ, ಹರಿಯಾಣ, ಮಣಿಪುರ, ಅಸ್ಸಾಂ, ತಮಿಳುನಾಡು, ಲಕ್ಷದ್ವೀಪದಲ್ಲಿ 4.01% ರಿಂದ 9.76%ವರೆಗೂ ಲಸಿಕೆ ವ್ಯರ್ಥವಾಗಿರುವ ವರದಿಯಾಗಿದೆ.
Good to see our healthcare workers and nurses set an example in reducing vaccine wastage.
— Narendra Modi (@narendramodi) May 5, 2021
Reducing vaccine wastage is important in strengthening the fight against COVID-19. https://t.co/xod0lomGDb
Prime Minister Narendra Modi on Wednesday praised the Kerala government's efforts in reducing vaccine wastage and said that it is important in strengthening the fight against COVID-19.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am