ಬ್ರೇಕಿಂಗ್ ನ್ಯೂಸ್
05-05-21 05:30 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 5: ಕೊರೊನಾ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸುವಲ್ಲಿ ಕೇರಳದ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರ ಪರಿಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಕೊರೊನಾ ಲಸಿಕೆಗಳು ಅನಗತ್ಯವಾಗಿ ವ್ಯರ್ಥವಾಗುವುದನ್ನು ತಪ್ಪಿಸುವುದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ತುಂಬಿದಂತೆ ಎಂದು ಹೇಳಿದ್ದಾರೆ.

ತಮ್ಮ ರಾಜ್ಯದಲ್ಲಿ ಕೊರೊನಾ ಲಸಿಕೆಗಳನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದರ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಧಾನಿ ಪ್ರತಿಕ್ರಿಯಿಸಿ, ಲಸಿಕೆ ವಿಚಾರದಲ್ಲಿ ಕೇರಳ ಸರ್ಕಾರ ನಡೆ ಮಾದರಿ ಎಂದು ಶ್ಲಾಘಿಸಿದ್ದಾರೆ.
ಕೇರಳಕ್ಕೆ ಕೇಂದ್ರ ಸರ್ಕಾರದಿಂದ 73,38,806 ಡೋಸ್ ಲಸಿಕೆಗಳು ಲಭ್ಯವಾಗಿವೆ. ಒಬ್ಬರಿಗೆ ಲಸಿಕೆ ನೀಡಿದ ನಂತರ ಉಳಿಯುವ, ವ್ಯರ್ಥವಾಗಬಹುದಾದ ಲಸಿಕೆಯನ್ನು ಬಳಸಿಕೊಂಡು ನಾವು 74,26,164 ಡೋಸ್ ಲಸಿಕೆ ನೀಡಿದ್ದೇವೆ. ನಮ್ಮ ಆರೋಗ್ಯ ಕಾರ್ಯಕರ್ತರು, ದಾದಿಯರು ಈ ನಿಟ್ಟಿನಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಮೆಚ್ಚುಗೆಗೆ ಅವರು ಅರ್ಹರು ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು.

ಲಸಿಕೆಯು ವ್ಯರ್ಥವಾಗುವುದನ್ನು ತಪ್ಪಿಸುವ ಮೂಲಕ ನಮ್ಮ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರು ಮಾದರಿ ಎನಿಸಿಕೊಂಡಿದ್ದಾರೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.
ಲಸಿಕೆ ವ್ಯರ್ಥ ಮಾಡುವ ವಿಚಾರದಲ್ಲಿ ಕೇರಳದ್ದು ಅತಿ ಕಡಿಮೆ ಪ್ರಮಾಣವಿದೆ. ಮೇಘಾಲಯ, ನಾಗಾಲ್ಯಾಂಡ್, ಬಿಹಾರ್, ಪಂಜಾಬ್, ದಾದ್ರಾ, ನಗರ್ ಹವೇಲಿ, ಹರಿಯಾಣ, ಮಣಿಪುರ, ಅಸ್ಸಾಂ, ತಮಿಳುನಾಡು, ಲಕ್ಷದ್ವೀಪದಲ್ಲಿ 4.01% ರಿಂದ 9.76%ವರೆಗೂ ಲಸಿಕೆ ವ್ಯರ್ಥವಾಗಿರುವ ವರದಿಯಾಗಿದೆ.
Good to see our healthcare workers and nurses set an example in reducing vaccine wastage.
— Narendra Modi (@narendramodi) May 5, 2021
Reducing vaccine wastage is important in strengthening the fight against COVID-19. https://t.co/xod0lomGDb
Prime Minister Narendra Modi on Wednesday praised the Kerala government's efforts in reducing vaccine wastage and said that it is important in strengthening the fight against COVID-19.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm