ಬ್ರೇಕಿಂಗ್ ನ್ಯೂಸ್
05-05-21 05:30 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 5: ಕೊರೊನಾ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸುವಲ್ಲಿ ಕೇರಳದ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರ ಪರಿಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಕೊರೊನಾ ಲಸಿಕೆಗಳು ಅನಗತ್ಯವಾಗಿ ವ್ಯರ್ಥವಾಗುವುದನ್ನು ತಪ್ಪಿಸುವುದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ತುಂಬಿದಂತೆ ಎಂದು ಹೇಳಿದ್ದಾರೆ.
ತಮ್ಮ ರಾಜ್ಯದಲ್ಲಿ ಕೊರೊನಾ ಲಸಿಕೆಗಳನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದರ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಧಾನಿ ಪ್ರತಿಕ್ರಿಯಿಸಿ, ಲಸಿಕೆ ವಿಚಾರದಲ್ಲಿ ಕೇರಳ ಸರ್ಕಾರ ನಡೆ ಮಾದರಿ ಎಂದು ಶ್ಲಾಘಿಸಿದ್ದಾರೆ.
ಕೇರಳಕ್ಕೆ ಕೇಂದ್ರ ಸರ್ಕಾರದಿಂದ 73,38,806 ಡೋಸ್ ಲಸಿಕೆಗಳು ಲಭ್ಯವಾಗಿವೆ. ಒಬ್ಬರಿಗೆ ಲಸಿಕೆ ನೀಡಿದ ನಂತರ ಉಳಿಯುವ, ವ್ಯರ್ಥವಾಗಬಹುದಾದ ಲಸಿಕೆಯನ್ನು ಬಳಸಿಕೊಂಡು ನಾವು 74,26,164 ಡೋಸ್ ಲಸಿಕೆ ನೀಡಿದ್ದೇವೆ. ನಮ್ಮ ಆರೋಗ್ಯ ಕಾರ್ಯಕರ್ತರು, ದಾದಿಯರು ಈ ನಿಟ್ಟಿನಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಮೆಚ್ಚುಗೆಗೆ ಅವರು ಅರ್ಹರು ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು.
ಲಸಿಕೆಯು ವ್ಯರ್ಥವಾಗುವುದನ್ನು ತಪ್ಪಿಸುವ ಮೂಲಕ ನಮ್ಮ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರು ಮಾದರಿ ಎನಿಸಿಕೊಂಡಿದ್ದಾರೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.
ಲಸಿಕೆ ವ್ಯರ್ಥ ಮಾಡುವ ವಿಚಾರದಲ್ಲಿ ಕೇರಳದ್ದು ಅತಿ ಕಡಿಮೆ ಪ್ರಮಾಣವಿದೆ. ಮೇಘಾಲಯ, ನಾಗಾಲ್ಯಾಂಡ್, ಬಿಹಾರ್, ಪಂಜಾಬ್, ದಾದ್ರಾ, ನಗರ್ ಹವೇಲಿ, ಹರಿಯಾಣ, ಮಣಿಪುರ, ಅಸ್ಸಾಂ, ತಮಿಳುನಾಡು, ಲಕ್ಷದ್ವೀಪದಲ್ಲಿ 4.01% ರಿಂದ 9.76%ವರೆಗೂ ಲಸಿಕೆ ವ್ಯರ್ಥವಾಗಿರುವ ವರದಿಯಾಗಿದೆ.
Good to see our healthcare workers and nurses set an example in reducing vaccine wastage.
— Narendra Modi (@narendramodi) May 5, 2021
Reducing vaccine wastage is important in strengthening the fight against COVID-19. https://t.co/xod0lomGDb
Prime Minister Narendra Modi on Wednesday praised the Kerala government's efforts in reducing vaccine wastage and said that it is important in strengthening the fight against COVID-19.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm