ಬ್ರೇಕಿಂಗ್ ನ್ಯೂಸ್
05-05-21 05:30 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 5: ಕೊರೊನಾ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸುವಲ್ಲಿ ಕೇರಳದ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರ ಪರಿಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಕೊರೊನಾ ಲಸಿಕೆಗಳು ಅನಗತ್ಯವಾಗಿ ವ್ಯರ್ಥವಾಗುವುದನ್ನು ತಪ್ಪಿಸುವುದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ತುಂಬಿದಂತೆ ಎಂದು ಹೇಳಿದ್ದಾರೆ.

ತಮ್ಮ ರಾಜ್ಯದಲ್ಲಿ ಕೊರೊನಾ ಲಸಿಕೆಗಳನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದರ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಧಾನಿ ಪ್ರತಿಕ್ರಿಯಿಸಿ, ಲಸಿಕೆ ವಿಚಾರದಲ್ಲಿ ಕೇರಳ ಸರ್ಕಾರ ನಡೆ ಮಾದರಿ ಎಂದು ಶ್ಲಾಘಿಸಿದ್ದಾರೆ.
ಕೇರಳಕ್ಕೆ ಕೇಂದ್ರ ಸರ್ಕಾರದಿಂದ 73,38,806 ಡೋಸ್ ಲಸಿಕೆಗಳು ಲಭ್ಯವಾಗಿವೆ. ಒಬ್ಬರಿಗೆ ಲಸಿಕೆ ನೀಡಿದ ನಂತರ ಉಳಿಯುವ, ವ್ಯರ್ಥವಾಗಬಹುದಾದ ಲಸಿಕೆಯನ್ನು ಬಳಸಿಕೊಂಡು ನಾವು 74,26,164 ಡೋಸ್ ಲಸಿಕೆ ನೀಡಿದ್ದೇವೆ. ನಮ್ಮ ಆರೋಗ್ಯ ಕಾರ್ಯಕರ್ತರು, ದಾದಿಯರು ಈ ನಿಟ್ಟಿನಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಮೆಚ್ಚುಗೆಗೆ ಅವರು ಅರ್ಹರು ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು.

ಲಸಿಕೆಯು ವ್ಯರ್ಥವಾಗುವುದನ್ನು ತಪ್ಪಿಸುವ ಮೂಲಕ ನಮ್ಮ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರು ಮಾದರಿ ಎನಿಸಿಕೊಂಡಿದ್ದಾರೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.
ಲಸಿಕೆ ವ್ಯರ್ಥ ಮಾಡುವ ವಿಚಾರದಲ್ಲಿ ಕೇರಳದ್ದು ಅತಿ ಕಡಿಮೆ ಪ್ರಮಾಣವಿದೆ. ಮೇಘಾಲಯ, ನಾಗಾಲ್ಯಾಂಡ್, ಬಿಹಾರ್, ಪಂಜಾಬ್, ದಾದ್ರಾ, ನಗರ್ ಹವೇಲಿ, ಹರಿಯಾಣ, ಮಣಿಪುರ, ಅಸ್ಸಾಂ, ತಮಿಳುನಾಡು, ಲಕ್ಷದ್ವೀಪದಲ್ಲಿ 4.01% ರಿಂದ 9.76%ವರೆಗೂ ಲಸಿಕೆ ವ್ಯರ್ಥವಾಗಿರುವ ವರದಿಯಾಗಿದೆ.
Good to see our healthcare workers and nurses set an example in reducing vaccine wastage.
— Narendra Modi (@narendramodi) May 5, 2021
Reducing vaccine wastage is important in strengthening the fight against COVID-19. https://t.co/xod0lomGDb
Prime Minister Narendra Modi on Wednesday praised the Kerala government's efforts in reducing vaccine wastage and said that it is important in strengthening the fight against COVID-19.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm