ಬ್ರೇಕಿಂಗ್ ನ್ಯೂಸ್
11-05-21 12:12 pm Headline Karnataka News Network ದೇಶ - ವಿದೇಶ
Photo credits : Representative Image
ತಿರುಪತಿ, ಮೇ 11: ವೈದ್ಯಕೀಯ ಆಮ್ಲಜನಕ ಪೂರೈಕೆಯಲ್ಲಿ ಆಗಿರುವ ವಿಳಂಬದಿಂದ 11 ಮಂದಿ ಕೊರೊನಾವೈರಸ್ ಸೋಂಕಿತರು ಪ್ರಾಣ ಬಿಟ್ಟಿರುವ ಘಟನೆ ಆಂಧ್ರ ಪ್ರದೇಶ ಚಿತ್ತೋರ್ ಜಿಲ್ಲೆಯ ತಿರುಪತಿಯಲ್ಲಿ ಇರುವ ಆಸ್ಪತ್ರೆಯಲ್ಲಿ ನಡೆದಿದೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ತುರ್ತು ನಿಗಾ ಘಟಕದಲ್ಲಿ ದಾಖಲಾದ ಕೊವಿಡ್-19 ರೋಗಿಗಳಿಗೆ ಸೂಕ್ತ ಸಮಯದಲ್ಲಿ ವೈದ್ಯಕೀಯ ಆಕ್ಸಿಜನ್ ಪೂರೈಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ 11 ರೋಗಿಗಳು ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದಾರೆ ಎಂದು ಚಿತ್ತೂರ್ ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ತಿಳಿಸಿದ್ದಾರೆ.

ವೈದ್ಯಕೀಯ ಆಮ್ಲಜನಕದ ಸಿಲಿಂಡರ್ ಅನ್ನು ರಿ-ಲೋಡ್ ಮಾಡುವ ಸಂದರ್ಭದಲ್ಲಿ 5 ನಿಮಿಷಗಳ ಕಾಲ ವಿಳಂಬವಾಗಿದೆ. ಈ ವೇಳೆ ಒತ್ತಡ ಹೆಚ್ಚಾದ ಹಿನ್ನೆಲೆ ಸಾವು ಸಂಭವಿಸಿದೆ. ಈ ಹಿನ್ನೆಲೆ ಹೆಚ್ಚಿನ ಅಪಾಯವನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಐದು ನಿಮಿಷಗಳಲ್ಲೇ ಆಕ್ಸಿಜನ್ ಸಿಲಿಂಡರ್ ರಿ-ಲೋಡ್ ಮಾಡಲಾಗುತ್ತಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ. ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಆಮ್ಲಜನಕ ಪೂರೈಕೆ ವಿಳಂಬದಿಂದ 11 ಮಂದಿ ಮೃತಪಡುತ್ತಿದ್ದಂತೆ ವೈದ್ಯರು ಎಚ್ಚೆತ್ತುಕೊಂಡಿದ್ದಾರೆ. ತುರ್ತು ನಿಗಾ ಘಟಕದ ರೋಗಿಗಳ ಚಿಕಿತ್ಸೆಗೆ ಏಕಕಾಲದಲ್ಲಿ 30ಕ್ಕೂ ಹೆಚ್ಚು ವೈದ್ಯರು ಧಾವಿಸಿದ್ದಾರೆ. ರುಯಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ, ಸೂಕ್ತ ಸಮಯದಲ್ಲಿ ಎಲ್ಲವೂ ಸರಬರಾಜು ಆಗುತ್ತಿದೆ. ಇದೇ ಆಸ್ಪತ್ರೆಯ ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆಗಳಲ್ಲಿ 700 ಕೊವಿಡ್-19 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 300 ಸೋಂಕಿತರಿಗೆ ಸಾಮಾನ್ಯ ವಾರ್ಡ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ಹೇಳಿದ್ದಾರೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ನಡೆದ 11 ಕೊವಿಡ್-19 ರೋಗಿಗಳ ಸಾವಿನ ಸಿಎಂ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿರುವ ಮುಖ್ಯಮಂತ್ರಿ ಜಗನ್, ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Eleven Covid patients who were in the ICU died at a government hospital in Andhra Pradesh's Tirupati on Monday evening after the supply of medical oxygen was disrupted. The deaths have been reported at a time when India is fighting a deadly second Covid wave and shortage of medical oxygen has emerged as a key challenge.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm