ಬ್ರೇಕಿಂಗ್ ನ್ಯೂಸ್
11-05-21 09:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 11: ಭಾರತದಲ್ಲಿ ಕಂಡುಬಂದಿರುವ ಕೊರೊನಾ ರೂಪಾಂತರಿ ವೈರಸ್ ಅತಿ ವೇಗವಾಗಿ ಹರಡುತ್ತಿದ್ದು, ಈಗಾಗ್ಲೇ 30ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕಂಡುಬಂದಿದೆ. ಹೀಗಾಗಿ ಬಿ 1617 ಮಾದರಿಯ ಈ ವೈರಸನ್ನು ಜಗತ್ತಿನಲ್ಲಿ ಕಳವಳ ಮೂಡಿಸಿದ ರೂಪಾಂತರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ.
ಭಾರತದ ಹಲವೆಡೆ ಕಂಡುಬಂದಿರುವ ಬಿ1617 ಹೆಸರಿನ ವೈರಸ್, ಮೂಲ ವೈರಸಿಗಿಂತ ತುಂಬ ವೇಗವಾಗಿ ಮತ್ತು ಸುಲಭದಲ್ಲಿ ಹರಡುತ್ತಿದೆ. 30ಕ್ಕೂ ಹೆಚ್ಚು ದೇಶಗಳಿಗೆ ಈಗಾಗ್ಲೇ ಈ ವೈರಸ್ ಹರಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
ಈಗಾಗ್ಲೇ ಡಬ್ಲ್ಯುಎಚ್ ಓ, ಯುಕೆಯಲ್ಲಿ (ಬಿ117), ದಕ್ಷಿಣ ಆಫ್ರಿಕಾ (ಬಿ1351), ಬ್ರಿಜಿಲ್ (ಪಿ1) ದೇಶಗಳಲ್ಲಿ ಕೊರೊನಾ ವೈರಸಿನ ರೂಪಾಂತರಿಗಳನ್ನು ಪತ್ತೆ ಮಾಡಿದ್ದು ಅವುಗಳಿಗೆ ಪ್ರತ್ಯೇಕ ಹೆಸರನ್ನೂ ಇಟ್ಟಿದೆ. ಭಾರತದಲ್ಲಿ ಕಂಡುಬಂದಿರುವ ಪ್ರಭೇದ ವಿಭಿನ್ನವಾಗಿದ್ದು, ಸುಲಭದಲ್ಲಿ ಹರಡುವುದು, ಗಂಭೀರ ಪರಿಣಾಮಗಳಿಗೆ ಕಾರಣವಾಗುವುದು, ರೋಗ ನಿರೋಧಕ ಶಕ್ತಿಯನ್ನು ನಾಶ ಮಾಡುವುದು, ಚಿಕಿತ್ಸೆ ಅಥವಾ ಲಸಿಕೆಯ ಪರಿಣಾಮಗಳನ್ನು ಕುಂಠಿತಗೊಳಿಸುವುದನ್ನು ಪತ್ತೆ ಮಾಡಲಾಗಿದೆ. ಇವೆಲ್ಲ ಕಾರಣಗಳಿಂದಾಗಿ ಜಾಗತಿಕ ಮಟ್ಟದಲ್ಲಿ ತುಂಬ ವಿಭಿನ್ನ ತಳಿಯೆಂದು ಗುರುತಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ 19 ಟೆಕ್ನಿಕಲ್ ಮುಖ್ಯಸ್ಥೆ ಮರಿಯಾ ವೆನ್ ಕೆರ್ಕೋವ್ ಹೇಳಿದ್ದಾರೆ.
ಹಾಗಿದ್ದರೂ, ಈಗ ಲಭ್ಯವಿರುವ ಲಸಿಕೆಗಳು ಹೊಸ ಮಾದರಿಯ ವೈರಸ್ ದಾಳಿಯ ಪರಿಣಾಮಗಳಿಂದ ಮತ್ತು ಅದರಿಂದ ಸಾವು ಸಂಭವಿಸುವುದನ್ನು ತಪ್ಪಿಸುವಷ್ಟು ಶಕ್ತವಾಗಿದೆ ಎಂದಿದ್ದಾರೆ. ಜಗತ್ತಿನಲ್ಲೀಗ ಕೋವಿಡ್ 19 ವೈರಸ್ಸಿನ ಹತ್ತು ರೂಪಾಂತರಿ ವೈರಸ್ ಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ ಬಿ1617 ಮಾದರಿಯ ವೈರಸ್ ವಿಭಿನ್ನವಾಗಿರುವುದು ಕಂಡುಬಂದಿದೆ. ಇದರ ಬಗ್ಗೆ ಅರಿತುಕೊಳ್ಳಲು ಇನ್ನಷ್ಟು ಸಂಶೋಧನೆ ಅಗತ್ಯವಿದೆ ಎಂದಿದ್ದಾರೆ.
A World Health Organization official said Monday it is reclassifying the highly contagious triple-mutant Covid variant spreading in India as a “variant of concern,” indicating that it’s become a global health threat.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am