ಬ್ರೇಕಿಂಗ್ ನ್ಯೂಸ್
27-08-20 09:47 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೊರೋನಾ ವೈರಸ್ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಎಸ್ಟಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬಿದ್ದಿದ್ದು, ರಾಜ್ಯಗಳಿಗೆ ಹೆಚ್ಚಿನ ಜಿಎಸ್ಟಿ ಪರಿಹಾರ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತಿಳಿಸಿದ್ದಾರೆ. ಇಂದು ಆನ್ಲೈನ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 41ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.
2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ 1.65 ಲಕ್ಷ ಕೋಟಿಗೂ ಹೆಚ್ಚು ಜಿಎಸ್ಟಿ ಪರಿಹಾರ ಹಣ ನೀಡಲಾಗಿದೆ. 97 ಸಾವಿರ ಕೋಟಿ ರೂ ಪರಿಹಾರ ಹಣದ ಕೊರತೆ ಬೀಳುವ ಅಂದಾಜು ಇದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಕೇಂದ್ರ ಸರ್ಕಾರದ ಪ್ರಕಾರ ಈ ವರ್ಷ ಜಿಎಸ್ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳುತ್ತಿದೆ. ಜಿಎಸ್ಟಿ ಸಂಗ್ರಹದಲ್ಲಿ ವ್ಯತ್ಯವಾದರೆ ಸರ್ಕಾರವೇ ಭರ್ತಿ ಮಾಡಬೇಕೆಂದು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಈ ಸಂದರ್ಭದಲ್ಲಿ ಒತ್ತಾಯಿಸಿದವು. ಆದರೆ, ಬಿಕ್ಕಟ್ಟಿನಿಂದ ಜಿಎಸ್ಟಿ ಸಂಗ್ರಹಕ್ಕೆ ಧಕ್ಕೆಯಾಗಿದ್ದರೆ ರಾಜ್ಯಗಳಿಗೆ ಪೂರ್ಣ ಜಿಎಸ್ಟಿ ಪಾಲು ಕೊಡಬೇಕೆಂಬ ನಿಯಮ ಇಲ್ಲವೆಂದು ಕೇಂದ್ರ ಸರ್ಕಾರ ಕಾನೂನು ಉಲ್ಲೇಖಿಸಿ ಸಭೆಯಲ್ಲಿ ಸ್ಪಷ್ಟಪಡಿಸಿತು.
ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಈ ಜಿಎಸ್ಟಿ ಸಭೆಯಲ್ಲಿ ಆದಾಯ ಕೊರತೆ ನೀಗಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು. ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದ್ದರೆ ರಾಜ್ಯ ಸರ್ಕಾರಗಳು ಹಣವನ್ನು ಸಾಲವಾಗಿ ಪಡೆಯಬಹುದು, ಸೆಸ್ ಮೊದಲಾದ ತೆರಿಗೆ ದರ ಏರಿಸಿ ಆದಾಯ ಮಾಡಬಹುದು ಎಂಬಿತ್ಯಾದಿ ಸಲಹೆಗಳು ಕೆಲ ರಾಜ್ಯಗಳಿಂದ ವ್ಯಕ್ತವಾದವು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm