ಬ್ರೇಕಿಂಗ್ ನ್ಯೂಸ್
27-08-20 09:47 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೊರೋನಾ ವೈರಸ್ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಎಸ್ಟಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬಿದ್ದಿದ್ದು, ರಾಜ್ಯಗಳಿಗೆ ಹೆಚ್ಚಿನ ಜಿಎಸ್ಟಿ ಪರಿಹಾರ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತಿಳಿಸಿದ್ದಾರೆ. ಇಂದು ಆನ್ಲೈನ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 41ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.
2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ 1.65 ಲಕ್ಷ ಕೋಟಿಗೂ ಹೆಚ್ಚು ಜಿಎಸ್ಟಿ ಪರಿಹಾರ ಹಣ ನೀಡಲಾಗಿದೆ. 97 ಸಾವಿರ ಕೋಟಿ ರೂ ಪರಿಹಾರ ಹಣದ ಕೊರತೆ ಬೀಳುವ ಅಂದಾಜು ಇದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಕೇಂದ್ರ ಸರ್ಕಾರದ ಪ್ರಕಾರ ಈ ವರ್ಷ ಜಿಎಸ್ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳುತ್ತಿದೆ. ಜಿಎಸ್ಟಿ ಸಂಗ್ರಹದಲ್ಲಿ ವ್ಯತ್ಯವಾದರೆ ಸರ್ಕಾರವೇ ಭರ್ತಿ ಮಾಡಬೇಕೆಂದು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಈ ಸಂದರ್ಭದಲ್ಲಿ ಒತ್ತಾಯಿಸಿದವು. ಆದರೆ, ಬಿಕ್ಕಟ್ಟಿನಿಂದ ಜಿಎಸ್ಟಿ ಸಂಗ್ರಹಕ್ಕೆ ಧಕ್ಕೆಯಾಗಿದ್ದರೆ ರಾಜ್ಯಗಳಿಗೆ ಪೂರ್ಣ ಜಿಎಸ್ಟಿ ಪಾಲು ಕೊಡಬೇಕೆಂಬ ನಿಯಮ ಇಲ್ಲವೆಂದು ಕೇಂದ್ರ ಸರ್ಕಾರ ಕಾನೂನು ಉಲ್ಲೇಖಿಸಿ ಸಭೆಯಲ್ಲಿ ಸ್ಪಷ್ಟಪಡಿಸಿತು.
ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಈ ಜಿಎಸ್ಟಿ ಸಭೆಯಲ್ಲಿ ಆದಾಯ ಕೊರತೆ ನೀಗಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು. ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದ್ದರೆ ರಾಜ್ಯ ಸರ್ಕಾರಗಳು ಹಣವನ್ನು ಸಾಲವಾಗಿ ಪಡೆಯಬಹುದು, ಸೆಸ್ ಮೊದಲಾದ ತೆರಿಗೆ ದರ ಏರಿಸಿ ಆದಾಯ ಮಾಡಬಹುದು ಎಂಬಿತ್ಯಾದಿ ಸಲಹೆಗಳು ಕೆಲ ರಾಜ್ಯಗಳಿಂದ ವ್ಯಕ್ತವಾದವು.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm