ಬ್ರೇಕಿಂಗ್ ನ್ಯೂಸ್
16-05-21 09:14 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 16: ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವಕನ ಪ್ರೇಮ ಪಾಶಕ್ಕೆ ಸಿಲುಕಿದ ಯುವತಿ, ಆತ ಸೇರಿದಂತೆ 25 ಮಂದಿಯಿಂದ ಸರಣಿ ಅತ್ಯಾಚಾರಕ್ಕೀಡಾದ ಘಟನೆ ರಾಜಧಾನಿ ದೆಹಲಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ದೆಹಲಿಯಲ್ಲಿ ಡಾಮೆಸ್ಟಿಕ್ ಕೇರಿಯರ್ ನಲ್ಲಿ ಉದ್ಯೋಗದಲ್ಲಿದ್ದ ಯುವತಿಗೆ ಕಳೆದ ಜನವರಿಯಲ್ಲಿ 23 ವರ್ಷದ ಸಾಗರ್ ಎನ್ನುವ ಯುವಕ ಫೇಸ್ಬುಕ್ ನಲ್ಲಿ ಪರಿಚಯ ಆಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿ ಇಬ್ಬರೂ ಫೋನಲ್ಲಿ ಸಂಭಾಷಣೆ ನಡೆಸುತ್ತಿದ್ದರು. ಈ ವೇಳೆ ಸಾಗರ್ ಯುವತಿಯನ್ನು ಮದುವೆಯಾಗುವ ಪ್ರಸ್ತಾಪ ಇಟ್ಟಿದ್ದು , ತನ್ನ ಹೆತ್ತವರಿಗೆ ಪರಿಚಯ ಮಾಡುವುದಾಗಿ ಹೇಳಿ ಮನೆಗೆ ಬರಲು ಹೇಳಿದ್ದಾನೆ.
ಹೀಗಾಗಿ ಕಳೆದ ಮೇ 3ರಂದು ಯುವತಿ ಆತ ಹೇಳಿದ್ದ ವಿಳಾಸದ ಹೋದಾಲ್ ನಲ್ಲಿರುವ ರಾಮಗರ್ ಎಂಬಲ್ಲಿಗೆ ತೆರಳಿದ್ದಳು. ರಾಮಗರ್ ಗ್ರಾಮದಲ್ಲಿ ಸಾಗರ್ ಭೇಟಿಯಾಗಿದ್ದು, ಅಲ್ಲಿನ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆತನ ಸೋದರರು ಮತ್ತು ಇತರ ಕೆಲವರು ಸೇರಿ ಗುಂಪಾಗಿ ಮದ್ಯ ಸೇವನೆ ಮಾಡುತ್ತಿದ್ದರು. ಬಳಿಕ ಸಾಗರ್ ಯುವತಿ ವಿರುದ್ಧ ತಿರುಗಿ ಬಿದ್ದಿದ್ದು ಅವರೆದುರಲ್ಲೇ ಅತ್ಯಾಚಾರ ನಡೆಸಿದ್ದಾನೆ. ಇತರ ಕೆಲವರು ಕೂಡ ಸರಣಿಯಾಗಿ ಅತ್ಯಾಚಾರ ನಡೆಸಿದ್ದಾರೆ.
ಮರುದಿನದ ವರೆಗೂ ಆಕೆಯನ್ನು ಅಲ್ಲಿ ಕೂಡಿ ಹಾಕಿದ್ದು, ಬಳಿಕ ಆಕಾಶ್ ಎನ್ನುವ ಗುಜರಿ ವ್ಯಾಪಾರಿ ಬಳಿ ಕರೆದೊಯ್ದಿದ್ದಾನೆ. ಅಲ್ಲಿಯೂ ಐದಾರು ಮಂದಿ ಸೇರಿ ಯುವತಿಯನ್ನು ಭೋಗಿಸಿದ್ದಾರೆ. ಸರಣಿ ಅತ್ಯಾಚಾರದಿಂದ ಯುವತಿಯ ಆರೋಗ್ಯ ಹದಗೆಟ್ಟಿದ್ದು, ಬಳಿಕ ಐವರು ಸೇರಿ ಆಕೆಯನ್ನು ರಸ್ತೆ ಬದಿ ಎಸೆದು ಹೋಗಿದ್ದರು.
ತೀವ್ರ ಬಳಲಿದ್ದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿದ ಬಳಿಕ ಹಸನ್ಪುರ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾಳೆ. ದೂರು ನೀಡುವಾಗ ಇಷ್ಟು ತಡವಾಗಿದ್ದು ಯಾಕೆಂದು ಪೊಲೀಸರು ಕೇಳಿದ್ದಕ್ಕೆ, ನಡೆದ ಕತೆಯನ್ನು ವಿವರಿಸಿದ್ದಾಳೆ. ಆರೋಗ್ಯ ಹದಗೆಟ್ಟಿದ್ದರಿಂದ ದೂರು ಕೊಡಲು ಸಾಧ್ಯವಾಗಲಿಲ್ಲ ಎಂದಿದ್ದಾಳೆ. ದೂರು ಸ್ವೀಕರಿಸಿದ ಹಸನ್ ಪುರ ಠಾಣೆಯ ಪೊಲೀಸರು ಆರೋಪಿ ಸಾಗರ್ ನನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.
A woman from Delhi was allegedly lured into a forest by her Facebook friend and was gang-raped by 25 men through the night and morning on May 3. The woman approached the cops 9 days after the incident took place when she eventually gathered the strength to narrate her ordeal.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm