ಬ್ರೇಕಿಂಗ್ ನ್ಯೂಸ್
18-05-21 03:17 pm Headline Karnataka News Network ದೇಶ - ವಿದೇಶ
Photo credits : The Indian Express
ಚಂಡೀಗಢ, ಮೇ 18: ಲೀವಿಂಗ್ ರಿಲೇಶನ್ ಸಂಬಂಧಗಳು ನೈತಿಕವಾಗಿ ಮತ್ತು ಸಾಮಾಜಿಕ ನೆಲೆಯಲ್ಲಿ ಒಪ್ಪತಕ್ಕದ್ದಲ್ಲ ಮತ್ತು ಸ್ವೀಕಾರಾರ್ಹವೂ ಅಲ್ಲ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹುಡುಗ- ಹುಡುಗಿ ಮನೆ ಬಿಟ್ಟು ಓಡಿ ಹೋಗಿದ್ದಲ್ಲದೆ, ಮದುವೆಯಾಗುವ ಮುನ್ನ ಜೊತೆಗೆ ಬಾಳುವುದಕ್ಕೆ ಅನುಮತಿ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ರೀತಿಯ ತೀರ್ಪು ನೀಡಿದೆ. ದೇಶದಲ್ಲಿ ಲೀವಿಂಗ್ ರಿಲೇಶನ್ ಸಂಬಂಧಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಹೈಕೋರ್ಟ್ ಇಂತಹ ಅಭಿಪ್ರಾಯ ವ್ಯಕ್ತಪಡಿಸಿದ್ದು ಮಹತ್ವ ಪಡೆದುಕೊಂಡಿದೆ.
ಪಂಜಾಬ್ ಪ್ರಾಂತ್ಯದ ಗುಲ್ಝಾ ಕುಮಾರಿ (19) ಮತ್ತು ಗುರ್ವಿಂದರ್ ಸಿಂಗ್ (22) ಎಂಬ ಇಬ್ಬರು ಮನೆ ಬಿಟ್ಟು ಓಡಿ ಬಂದಿದ್ದು ನಾವು ಸದ್ಯದಲ್ಲೇ ಮದುವೆಯಾಗುತ್ತೇವೆ. ಅಲ್ಲೀವರೆಗೆ ಜೊತೆಯಾಗಿರಲು ಅನುಮತಿ ನೀಡಬೇಕು ಎಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರು ಲೀವಿಂಗ್ ರಿಲೇಶನ್ ಶಿಪ್ ಹೊಂದಲು ಬಯಸಿದ್ದಾರೆ. ಆದರೆ, ಈ ರೀತಿಯ ಸಂಬಂಧಗಳು ಸಮಾಜದಲ್ಲಿ ಸ್ವೀಕಾರಾರ್ಹವಲ್ಲ. ಒಪ್ಪುವಂಥದ್ದೂ ಅಲ್ಲ. ಹೀಗಾಗಿ ಈ ರೀತಿಯ ಸಂಬಂಧಗಳ ಬಗ್ಗೆ ಯಾವುದೇ ರೀತಿಯ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಅಲ್ಲದೆ, ಯುವಜೋಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಮಾಹಿತಿ ಪ್ರಕಾರ, ಹುಡುಗಿಯ ಮದುವೆಗೆ ಆಕೆಯ ಹೆತ್ತವರು ಒಪ್ಪಿಗೆ ನೀಡಿಲ್ಲ. ಹೆತ್ತವರ ವಿರೋಧದ ಮಧ್ಯೆ ಲೂಧಿಯಾನದಿಂದ ಹುಡುಗಿಯನ್ನು ತಾರನ್ ಜಿಲ್ಲೆಗೆ ಹುಡುಗ ಕರೆದೊಯ್ದು ಜೊತೆಗೆ ವಾಸ ಮಾಡಲಾರಂಭಿಸಿದ್ದ. ಆಕೆಯ ವಯಸ್ಸು ಭರ್ತಿಯಾಗಿರುವ ಬಗ್ಗೆ ದಾಖಲೆ ಪತ್ರಗಳು ಲಭ್ಯವಿಲ್ಲದ ಕಾರಣ ಹುಡುಗಿಯನ್ನು ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹುಡುಗಿ ಮನೆಯವರ ಭಯದಿಂದ ಪೊಲೀಸರ ರಕ್ಷಣೆ ಬೇಕೆಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
The Punjab and Haryana high court has made it clear that the “live-in-relationship is morally or socially not acceptable.” Justice H S Madaan passed these orders while dismissing the petition filed by a runaway couple from Punjab’s Tarn Taran district seeking protection of their life and liberty. The couple, in this case, was in a “live-in” relationship.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm