ಬ್ರೇಕಿಂಗ್ ನ್ಯೂಸ್
21-05-21 02:59 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 21: ದೇಶದಲ್ಲಿ ಕೊರೊನಾ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರಿದೆ. ಆದರೆ ಕೊರೊನಾ ಸೋಂಕಿನ ನಂತರ ಕಾಣಿಸಿಕೊಳ್ಳುತ್ತಿರುವ ಈ ಬ್ಲ್ಯಾಕ್ ಫಂಗಸ್ ದೇಶಕ್ಕೆ ಹೊಸ ಸವಾಲನ್ನು ಒಡ್ಡಿದೆ. ಈ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಸಜ್ಜಾಗಬೇಕಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಕೊರೊನಾ ನಿರ್ವಹಣೆ ಸಂಬಂಧ ಶುಕ್ರವಾರ ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಆರೋಗ್ಯ ಕಾರ್ಯಕರ್ತರು, ವೈದ್ಯರೊಂದಿಗೆ ವರ್ಚುಯಲ್ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಕೊರೊನಾ ನಿರ್ವಹಣೆಯಲ್ಲಿ ವಾರಾಣಸಿಯ ಆರೋಗ್ಯ ವ್ಯವಸ್ಥೆ ಕುರಿತು ಮೆಚ್ಚುಗೆ ಸೂಚಿಸಿದರು. ದೇಶದಲ್ಲಿ ಕೊರೊನಾ ನಿಯಂತ್ರಣದ ಕುರಿತು ಹಲವು ಮಾತುಗಳನ್ನು ಹಂಚಿಕೊಂಡರು
ಕೊರೊನಾ ನಮಗೆ ಅತಿ ದೊಡ್ಡ ಸವಾಲನ್ನೇ ಒಡ್ಡಿದೆ. ಇದೀಗ ಕೊರೊನಾ ರೋಗಿಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಮತ್ತೊಂದು ಸವಾಲನ್ನು ಎದುರಿಗಿಟ್ಟಿದೆ. ಕೊರೊನಾ ಸೋಂಕಿನ ವಿರುದ್ಧ ನಾವೆಲ್ಲಾ ಒಟ್ಟಾಗಿ ಹೋರಾಡುತ್ತಿದ್ದೇವೆ. ಹಾಗೆಯೇ ಬ್ಲ್ಯಾಕ್ ಫಂಗಸ್ ವಿರುದ್ಧವೂ ಹೋರಾಡುವ ಅವಶ್ಯಕತೆಯಿದೆ. ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
"ಕೊರೊನಾ ನಮ್ಮಿಂದ ಹಲವರನ್ನು ಕಿತ್ತುಕೊಂಡಿದೆ"
ಕೊರೊನಾ ಸೋಂಕು ನಮ್ಮಿಂದ ಹಲವು ಜನರನ್ನು ಕಿತ್ತುಕೊಂಡಿದೆ. ಕೊರೊನಾದಿಂದಾಗಿ ಸಾವಿರಾರು, ಲಕ್ಷಾಂತರ ಜನರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ" ಎಂದು ಪ್ರಧಾನಿ ಸಭೆಯಲ್ಲಿ ಭಾವುಕರಾದ ಸಂಗತಿ ನಡೆಯಿತು.
ಗ್ರಾಮಗಳಲ್ಲಿ ಎಚ್ಚರಿಕೆಯಿಂದಿರಲು ಸೂಚನೆ
ಕೊರೊನಾ ವಿರುದ್ಧ ನಾವಿನ್ನೂ ಬಹುಕಾಲ ಹೋರಾಡಬೇಕಿದೆ. ಗ್ರಾಮಗಳಲ್ಲಿ ಕೊರೊನಾ ಸೋಂಕಿನ ನಿರ್ವಹಣೆ ಕುರಿತು ಹೆಚ್ಚಿನ ಗಮನ ನೀಡಬೇಕಿದೆ ಎಂದು ತಿಳಿಸಿದ್ದಾರೆ. ಈ ಸೋಂಕು ನಮ್ಮ ದೇಶದ ಆರೋಗ್ಯ ವ್ಯವಸ್ಥೆಯನ್ನು ಒತ್ತಡಕ್ಕೆ ಸಿಲುಕಿಸಿದೆ. ಹೀಗಾಗಿ ಹಲವು ಆಯಾಮಗಳಲ್ಲಿ ಹೋರಾಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ. ಕೊರೊನಾ ಲಸಿಕೆ ಕುರಿತು ಮಾತನಾಡಿದ ಅವರು, ತಮ್ಮ ತಮ್ಮ ಸರದಿ ಬಂದಾಗ ಲಸಿಕೆ ತೆಗೆದುಕೊಳ್ಳಿ. ಇದು ನಮ್ಮ ಲೈಫ್ ಜ್ಯಾಕೆಟ್ ಇದ್ದ ಹಾಗೆ ಎಂದರು.
ವಾರಾಣಸಿ ಆರೋಗ್ಯ ಕಾರ್ಯಕರ್ತರಿಗೆ ಮೆಚ್ಚುಗೆ
ವಾರಾಣಸಿಯಲ್ಲಿ ಕೊರೊನಾ ನಿರ್ವಹಣೆ ಮಾಡುವಲ್ಲಿ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಮೋದಿ ಶ್ಲಾಘಿಸಿದರು. ವಾರಾಣಸಿಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲಿಲ್ಲ. ಬದಲಾಗಿ ಕಂಟೈನ್ಮೆಂಟ್ ಝೋನ್ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಸಕರಾತ್ಮಕತೆಯೊಂದಿಗೆ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗಿದೆ. ಲಸಿಕೆ ನೀಡುವಲ್ಲಿ ಹಾಗೂ ಕೊರೊನಾ ಕುರಿತು ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಲೇಬೇಕಿದೆ ಎಂದಿದ್ದಾರೆ.
हमें अभी एक लंबी लड़ाई लड़नी है। बनारस और पूर्वांचल के ग्रामीण इलाकों पर भी बहुत ध्यान देना है।
— Narendra Modi (@narendramodi) May 21, 2021
‘जहां बीमार वहीं उपचार’, इस सिद्धांत पर माइक्रो-कंटेनमेंट जोन बनाकर जिस तरह शहर एवं गांवों में घर-घर दवाएं बांटी जा रही हैं, यह बहुत अच्छी पहल है। इस अभियान को और व्यापक करना है। pic.twitter.com/SFkZyAyRGG
Prime Minister Narendra Modi on Friday got emotional while remembering people who died of Covid-19. PM Modi said, "This virus took away so many people who were close to us. I offer my deepest condolences to their families."
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm