ಬ್ರೇಕಿಂಗ್ ನ್ಯೂಸ್
21-05-21 02:59 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 21: ದೇಶದಲ್ಲಿ ಕೊರೊನಾ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರಿದೆ. ಆದರೆ ಕೊರೊನಾ ಸೋಂಕಿನ ನಂತರ ಕಾಣಿಸಿಕೊಳ್ಳುತ್ತಿರುವ ಈ ಬ್ಲ್ಯಾಕ್ ಫಂಗಸ್ ದೇಶಕ್ಕೆ ಹೊಸ ಸವಾಲನ್ನು ಒಡ್ಡಿದೆ. ಈ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಸಜ್ಜಾಗಬೇಕಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಕೊರೊನಾ ನಿರ್ವಹಣೆ ಸಂಬಂಧ ಶುಕ್ರವಾರ ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಆರೋಗ್ಯ ಕಾರ್ಯಕರ್ತರು, ವೈದ್ಯರೊಂದಿಗೆ ವರ್ಚುಯಲ್ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಕೊರೊನಾ ನಿರ್ವಹಣೆಯಲ್ಲಿ ವಾರಾಣಸಿಯ ಆರೋಗ್ಯ ವ್ಯವಸ್ಥೆ ಕುರಿತು ಮೆಚ್ಚುಗೆ ಸೂಚಿಸಿದರು. ದೇಶದಲ್ಲಿ ಕೊರೊನಾ ನಿಯಂತ್ರಣದ ಕುರಿತು ಹಲವು ಮಾತುಗಳನ್ನು ಹಂಚಿಕೊಂಡರು

ಕೊರೊನಾ ನಮಗೆ ಅತಿ ದೊಡ್ಡ ಸವಾಲನ್ನೇ ಒಡ್ಡಿದೆ. ಇದೀಗ ಕೊರೊನಾ ರೋಗಿಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಮತ್ತೊಂದು ಸವಾಲನ್ನು ಎದುರಿಗಿಟ್ಟಿದೆ. ಕೊರೊನಾ ಸೋಂಕಿನ ವಿರುದ್ಧ ನಾವೆಲ್ಲಾ ಒಟ್ಟಾಗಿ ಹೋರಾಡುತ್ತಿದ್ದೇವೆ. ಹಾಗೆಯೇ ಬ್ಲ್ಯಾಕ್ ಫಂಗಸ್ ವಿರುದ್ಧವೂ ಹೋರಾಡುವ ಅವಶ್ಯಕತೆಯಿದೆ. ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

"ಕೊರೊನಾ ನಮ್ಮಿಂದ ಹಲವರನ್ನು ಕಿತ್ತುಕೊಂಡಿದೆ"
ಕೊರೊನಾ ಸೋಂಕು ನಮ್ಮಿಂದ ಹಲವು ಜನರನ್ನು ಕಿತ್ತುಕೊಂಡಿದೆ. ಕೊರೊನಾದಿಂದಾಗಿ ಸಾವಿರಾರು, ಲಕ್ಷಾಂತರ ಜನರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ" ಎಂದು ಪ್ರಧಾನಿ ಸಭೆಯಲ್ಲಿ ಭಾವುಕರಾದ ಸಂಗತಿ ನಡೆಯಿತು.

ಗ್ರಾಮಗಳಲ್ಲಿ ಎಚ್ಚರಿಕೆಯಿಂದಿರಲು ಸೂಚನೆ
ಕೊರೊನಾ ವಿರುದ್ಧ ನಾವಿನ್ನೂ ಬಹುಕಾಲ ಹೋರಾಡಬೇಕಿದೆ. ಗ್ರಾಮಗಳಲ್ಲಿ ಕೊರೊನಾ ಸೋಂಕಿನ ನಿರ್ವಹಣೆ ಕುರಿತು ಹೆಚ್ಚಿನ ಗಮನ ನೀಡಬೇಕಿದೆ ಎಂದು ತಿಳಿಸಿದ್ದಾರೆ. ಈ ಸೋಂಕು ನಮ್ಮ ದೇಶದ ಆರೋಗ್ಯ ವ್ಯವಸ್ಥೆಯನ್ನು ಒತ್ತಡಕ್ಕೆ ಸಿಲುಕಿಸಿದೆ. ಹೀಗಾಗಿ ಹಲವು ಆಯಾಮಗಳಲ್ಲಿ ಹೋರಾಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ. ಕೊರೊನಾ ಲಸಿಕೆ ಕುರಿತು ಮಾತನಾಡಿದ ಅವರು, ತಮ್ಮ ತಮ್ಮ ಸರದಿ ಬಂದಾಗ ಲಸಿಕೆ ತೆಗೆದುಕೊಳ್ಳಿ. ಇದು ನಮ್ಮ ಲೈಫ್ ಜ್ಯಾಕೆಟ್ ಇದ್ದ ಹಾಗೆ ಎಂದರು.

ವಾರಾಣಸಿ ಆರೋಗ್ಯ ಕಾರ್ಯಕರ್ತರಿಗೆ ಮೆಚ್ಚುಗೆ
ವಾರಾಣಸಿಯಲ್ಲಿ ಕೊರೊನಾ ನಿರ್ವಹಣೆ ಮಾಡುವಲ್ಲಿ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಮೋದಿ ಶ್ಲಾಘಿಸಿದರು. ವಾರಾಣಸಿಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲಿಲ್ಲ. ಬದಲಾಗಿ ಕಂಟೈನ್ಮೆಂಟ್ ಝೋನ್ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಸಕರಾತ್ಮಕತೆಯೊಂದಿಗೆ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗಿದೆ. ಲಸಿಕೆ ನೀಡುವಲ್ಲಿ ಹಾಗೂ ಕೊರೊನಾ ಕುರಿತು ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಲೇಬೇಕಿದೆ ಎಂದಿದ್ದಾರೆ.
हमें अभी एक लंबी लड़ाई लड़नी है। बनारस और पूर्वांचल के ग्रामीण इलाकों पर भी बहुत ध्यान देना है।
— Narendra Modi (@narendramodi) May 21, 2021
‘जहां बीमार वहीं उपचार’, इस सिद्धांत पर माइक्रो-कंटेनमेंट जोन बनाकर जिस तरह शहर एवं गांवों में घर-घर दवाएं बांटी जा रही हैं, यह बहुत अच्छी पहल है। इस अभियान को और व्यापक करना है। pic.twitter.com/SFkZyAyRGG
Prime Minister Narendra Modi on Friday got emotional while remembering people who died of Covid-19. PM Modi said, "This virus took away so many people who were close to us. I offer my deepest condolences to their families."
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm