ಬ್ರೇಕಿಂಗ್ ನ್ಯೂಸ್
21-05-21 03:43 pm Headline Karnataka News Network ದೇಶ - ವಿದೇಶ
ಕಲಬುರ್ಗಿ, ಮೇ 21 : ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಲು ಕಾಂಗ್ರೆಸ್ಸಿಗರ ನೀಚ ರಾಜಕೀಯವೇ ಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರುಚ್ಚರಿಸಿದ್ದಾರೆ.
ಇಲ್ಲಿನ ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಅವರು ಮಾತನಾಡಿದರು. ದೇಶದ ಲಸಿಕೆ ಬಗ್ಗೆ ಆರಂಭದಲ್ಲಿ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು. ಲಸಿಕೆ ಪರಿಣಾಮಕಾರಿ ಅಲ್ಲ, ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದರು. ಇದರಿಂದಾಗಿ ಲಸಿಕೆ ಪಡೆಯಲು ಹಲವರು ಹಿಂಜರಿದಿದ್ದರಿಂದ ಈಗ ಸೋಂಕು ಹೆಚ್ಚುವಂತಾಗಿದೆ. ಸೋಂಕಿನ ಕಾರಣ ಸಾವಿನ ಪ್ರಮಾಣವೂ ಹೆಚ್ಚಾಗಿದೆ ಎಂದು ದೂರಿದರು.


ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಅವರ ಹೇಳಿಕೆ ಸತ್ಯವಾಗಿದೆ. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ ಎಂದು ನಳಿನ್ ಆರೋಪಿಸಿದರು.

ಫೆಬ್ರುವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ಪಡೆದುಕೊಂಡು ಜನರಿಗೆ ಲಸಿಕೆ ಪಡೆಯಲು ಪ್ರೇರಣೆ ನೀಡಿದರು. ಆದರೂ ಜನ ಮೇ ವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಕೂಡ ಈ ರೀತಿಯ ಆರೋಪಗಳಿಂದ ಹೊರತಾಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯ ಸಹ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕಾಗಿ ಕಾಂಗ್ರೆಸಿಗರು ಮಾಡುತ್ತಿರುವ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಅದಕ್ಕಾಗಿಯೇ ಜನ ಅವರನ್ನು ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಓಡಿಸುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಮೂದಲಿಸಿದರು.
The dirty politics of Congress is the reason for the widespread of Coronavirus in India mocks Naleen Kumar Kateel during a BJP led program in Kalaburgi
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm