ಬ್ರೇಕಿಂಗ್ ನ್ಯೂಸ್
25-05-21 12:45 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 24 : ಕೊರೊನಾ ಲಾಕ್ಡೌನ್ ನಡುವೆ ಯುವ ಜೋಡಿ ವಿಮಾನದಲ್ಲಿ ಮದುವೆಯಾಗಿರುವುದು ಈಗ ವಿಮಾನ ಕಂಪನಿಯ ಕುತ್ತಿಗೆ ಹಿಡಿಯುವಂತಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವಿಮಾನ ಹಾರಾಟದ ವೇಳೆ ಜೋಡಿ ಮದುವೆಯಾಗಿರುವ ವಿಚಾರದಲ್ಲಿ ಸ್ಪೈಸ್ ಜೆಟ್ ಚಾರ್ಟರ್ಡ್ ವಿಮಾನ ಸಿಬ್ಬಂದಿಯನ್ನು ಡಿಜಿಸಿಎ ಕರ್ತವ್ಯದಿಂದ ಅಮಾನತುಗೊಳಿಸಿದೆ.
ಮೇ 23ರಂದು ಮಧುರೈನ ರಾಕೇಶ್ ಹಾಗೂ ದಕ್ಷಿಣಾ ಜೋಡಿ ಮಧುರೈ- ಬೆಂಗಳೂರು ವಿಮಾನವನ್ನು ಬುಕ್ ಮಾಡಿ, ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಸುಮಾರು 160 ಜನ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.



ವಿಮಾನದಲ್ಲಿ ಪ್ರಯಾಣಿಕರು ಕೋವಿಡ್ ನಿಯಮ ಉಲ್ಲಂಘನೆ ಮಾಡಲು ಕಾರಣವಾದ ವಿಮಾನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪ್ರಯಾಣಿಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಮಧುರೈನ ಟ್ರಾವಲ್ ಏಜೆಂಟ್ ಒಬ್ಬರ ಮೂಲಕ ಮೇ 23ರಂದು ಸ್ಪೈಸ್ ಜೆಟ್ ಬೋಯಿಂಗ್ 737 ಚಾರ್ಟರ್ಡ್ ವಿಮಾನವನ್ನು ಬುಕ್ ಮಾಡಲಾಗಿತ್ತು. ವಿವಾಹದ ನಂತರ ಜಾಲಿ ರೈಡ್ಗೆ ವಿಮಾನ ಬುಕ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ವಿಮಾನದಲ್ಲಿ ಪ್ರಯಾಣಿಸುವವರಿಗೆ ಕೊರೊನಾ ಮಾರ್ಗಸೂಚಿ ಕುರಿತು ವಿವರಿಸಿದ್ದೆವು. ಫೋಟೊ, ವಿಡಿಯೊ ಚಿತ್ರೀಕರಣ ಮಾಡಬಾರದು ಎಂದು ಕೂಡ ತಿಳಿಸಿದ್ದೆವು. ಆದರೂ ನಿಯಮಗಳನ್ನು ಪಾಲಿಸಿಲ್ಲ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪೈಸ್ ಜೆಟ್ ತಿಳಿಸಿದೆ.
Read: ಲಾಕ್ಡೌನ್ ಭಯ ; ವಿಮಾನದಲ್ಲಿ ಹಾರಾಡುತ್ತಲೇ ಯುವ ಜೋಡಿಯ ಕಲ್ಯಾಣೋತ್ಸವ !
A wedding on a chartered flight has won full marks for ingenuity but is under investigation over the violation of Covid-safety rules. The aviation regulator has asked for a report and the crew of the SpiceJet flight has been taken off duty for the inquiry, according to ANI. The bride, groom, and their families may face action as SpiceJet says passengers did not follow rules despite repeated requests.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm