ಬ್ರೇಕಿಂಗ್ ನ್ಯೂಸ್
25-05-21 02:49 pm Headline Karnataka News Network ದೇಶ - ವಿದೇಶ
Photo credits : zoom news
ಲಕ್ನೋ, ಮೇ 25: ದೇಶದೆಲ್ಲೆಡೆ ಕೊರೊನಾ ಲಸಿಕೆಗಾಗಿ ಹಾಹಾಕಾರ ಎದ್ದಿದ್ದರೆ, ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಲಸಿಕೆ ನೀಡಲು ಬಂದ ಆರೋಗ್ಯ ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ ಘಟನೆ ಬೆಳಕಿಗೆ ಬಂದಿದೆ.
ಕೊರೊನಾಗೆ ಲಸಿಕೆ ಪಡೆಯಬೇಕು ಎನ್ನುವ ನೆಲೆಯಲ್ಲಿ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಅಧಿಕಾರಿಗಳು ತೆರಳಿದ್ದರು. ಅಲ್ಲದೆ, ಲಸಿಕೆ ಪಡೆಯಲು ಒಪ್ಪಿದ ಜನರಿಗೆ ಸ್ಥಳದಲ್ಲೇ ಲಸಿಕೆಯನ್ನೂ ನೀಡಲಾಗುತ್ತಿತ್ತು. ಆದರೆ, ಗ್ರಾಮಸ್ಥರು ಅಧಿಕಾರಿಗಳ ಮಾತು ಒಪ್ಪದೆ ನೀವು ಲಸಿಕೆ ನೀಡುತ್ತಿಲ್ಲ. ಅದರಲ್ಲಿ ಏನೋ ವಿಷ ಇದೆ ಎಂದು ಭ್ರಮಿಸಿ ಅಧಿಕಾರಿಗಳ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಅಲ್ಲದೆ, ಬಾರಾಬಂಕಿ ಗ್ರಾಮದಲ್ಲಿ ಹರಿಯುವ ಸರಯೂ ನದಿಗೆ ಹಾರಿ ಅಧಿಕಾರಿಗಳ ಕೈಯಿಂದ ತಪ್ಪಿಸಿ ಓಡಿದ್ದಾರೆ.



ರಾಮನಗರ್ ಉಪ ವಿಭಾಗಾಧಿಕಾರಿ ರಾಜೀವ ಕುಮಾರ್ ಶುಕ್ಲಾ ಈ ಬಗ್ಗೆ ಹೇಳಿಕೆ ನೀಡಿದ್ದು ಗ್ರಾಮಸ್ಥರಿಗೆ ಅರಿವು ಮೂಡಿಸಿದರೂ ನಮ್ಮ ಮಾತು ಕೇಳಲಿಲ್ಲ. ಕೇವಲ 14 ಮಂದಿಯಷ್ಟೇ ಲಸಿಕೆ ಪಡೆದಿದ್ದಾರೆ. ಲಸಿಕೆಯಲ್ಲ , ಅದು ವಿಷ ಎನ್ನುತ್ತಲೇ ಕೆಲವರು ನದಿಗೆ ಹಾರಿ ಓಡಿದ್ದಾರೆ ಎಂದು ಹೇಳಿಕೆದ್ದಾರೆ.
ದೇಶದಲ್ಲಿ 18ರಿಂದ 44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ಸಾಧ್ಯವಾಗದೆ, ಲಸಿಕೆ ಪೂರೈಕೆಯಲ್ಲೇ ಕೊರತೆ ಎದುರಾಗಿದೆ. ಇದೇ ವೇಳೆ, ವೈದ್ಯಕೀಯ ತಜ್ಞರು ಎಲ್ಲರೂ ಕೋವಿಡ್ ಸೋಂಕನ್ನು ತಪ್ಪಿಸಲು ಲಸಿಕೆ ಪಡೆಯಲೇಬೇಕೆಂದು ಹೇಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಹಳ್ಳಿಯ ಜನರು ಲಸಿಕೆಯ ಬಗ್ಗೆಯೇ ಭಯ ಹೊಂದಿದ್ದಲ್ಲದೆ, ಅಧಿಕಾರಿಗಳ ಮಾತು ಕೇಳದೆ ಓಡಿ ತಪ್ಪಿಸಿಕೊಳ್ಳುತ್ತಿರುವ ಪ್ರಸಂಗ ಎದುರಾಗಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
Even as people in many states are scrambling to get vaccinated, residents of a village in Uttar Pradesh’s Barabanki district fled their homes when a team of health officials reached there to carry out a vaccination campaign on Saturday evening and jumped into the river Saryu.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am