ಬ್ರೇಕಿಂಗ್ ನ್ಯೂಸ್
26-05-21 08:57 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 26: ಅಲೋಪತಿ ವೈದ್ಯಕೀಯವೇ ಸುಳ್ಳು, ಮೂರ್ಖ ವಿಜ್ಞಾನ ಎಂದು ಹೇಳಿಕೆ ನೀಡಿದ್ದ ಪತಂಜಲಿ ಗುರು ಬಾಬಾ ರಾಮದೇವ್ ವಿರುದ್ಧ ಐಎಂಎ ಒಂದು ಸಾವಿರ ಕೋಟಿ ರೂ. ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ಹೂಡುವ ಬೆದರಿಕೆ ಹಾಕಿದೆ. ತಮ್ಮ ಹೇಳಿಕೆಯ ಬಗ್ಗೆ 15 ದಿನಗಳಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಈ ಬಗ್ಗೆ ಸಾವಿರ ಕೋಟಿ ಪರಿಹಾರಕ್ಕಾಗಿ ಪ್ರಕರಣ ದಾಖಲಿಸುತ್ತೇವೆ ಎಂದು ಉತ್ತರಾಖಂಡ ರಾಜ್ಯ ಐಎಂಎ ಘಟಕ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಬಾಬಾ ರಾಮದೇವ್ ವಿರುದ್ಧ ಆರು ಪುಟಗಳ ನೋಟೀಸ್ ನೀಡಿರುವ ಉತ್ತರಾಖಂಡ ಐಎಂಎ ಘಟಕದ ಕಾರ್ಯದರ್ಶಿ ಅಜಯ್ ಖನ್ನಾ, ರಾಮದೇವ್ ಅಲೋಪತಿ ವೈದ್ಯರನ್ನು ಅವಮಾನಿಸಿದ್ದಾರೆ. ನಮ್ಮ ಘಟಕದ ಎರಡು ಸಾವಿರ ಮಂದಿ ಸದಸ್ಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.

15 ದಿನಗಳಲ್ಲಿ ಲಿಖಿತ ರೂಪದಲ್ಲಿ ಕ್ಷಮೆ ಯಾಚಿಸದಿದ್ದರೆ ಯೋಗಗುರು ವಿರುದ್ಧ ಸೆಕ್ಷನ್ 499 ಪ್ರಕಾರ ಕ್ರಿಮಿನಲ್ ಕೇಸು ದಾಖಲು ಮಾಡುತ್ತೇವೆ. ಪ್ರತೀ ಸದಸ್ಯನಿಗೆ 50 ಲಕ್ಷ ರೂ.ನಂತೆ ಒಂದು ಸಾವಿರ ಕೋಟಿ ರೂಪಾಯಿ ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇವೆ ಎಂದು ವಕೀಲರ ಮೂಲಕ ಹೇಳಿದ್ದಾರೆ.
ಇದೇ ವೇಳೆ, ಪತಂಜಲಿಯಿಂದ ನೀಡಲಾಗುತ್ತಿರುವ ಕೊರೊನಿಲ್ ಕಿಟ್ ಬಗ್ಗೆಯೂ ಐಎಂಎ ಆಕ್ಷೇಪ ಎತ್ತಿದೆ. ಕೊರೊನಾಗೆ ಔಷಧಿ ಎನ್ನುವ ರೀತಿ ಬಿಂಬಿಸಿ ಜಾಹೀರಾತು ನೀಡಲಾಗಿದೆ. ಅದನ್ನೂ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದರ ವಿರುದ್ಧವೂ ಎಫ್ಐಆರ್ ದಾಖಲು ಮಾಡುತ್ತೀವಿ ಎಂದು ಎಚ್ಚರಿಸಲಾಗಿದೆ.
ಅಲೋಪತಿ ವೈದ್ಯರು ಮತ್ತು ಫಾರ್ಮಾ ಕಂಪನಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಾಬಾ ರಾಮದೇವ್, 25 ಪ್ರಶ್ನೆಗಳನ್ನು ಮುಂದಿಟ್ಟು ಅಲೋಪತಿ ವೈದ್ಯಕೀಯ ವಿಜ್ಞಾನವನ್ನೇ ಅಣಕಿಸಿದ್ದಾರೆ. ಅಲೋಪತಿಯಲ್ಲಿ ಮಧುಮೇಹ, ಬಿಪಿಗಳಿಗೆ ಶಾಶ್ವತ ಪರಿಹಾರ ಇದೆಯೇ, ಸಂಧಿವಾತ, ಥೈರಾಯ್ಡ್, ಅಸ್ತಮಾಗೆ ಶಾಶ್ವತ ಚಿಕಿತ್ಸೆ ಇದೆಯೇ, ಹೆಪಟೈಟಿಸ್, ಪಿತ್ತ ಜನಕಾಂಗದ ಸಿರೋಸಿಸ್ ಗುಣಪಡಿಸುವ ಚಿಕಿತ್ಸೆ ಇದೆಯೇ, ತಲೆನೋವು, ಮೈಗ್ರೇನ್ ಗೆ ಶಾಶ್ವತ ಪರಿಹಾರ ಇದೆಯೇ, ಪಾರ್ಕಿನ್ಸನ್ ಕಾಯಿಲೆಗೆ ಶಾಶ್ವತ ಚಿಕಿತ್ಸೆ ಇದೆಯೇ ಇತ್ಯಾದಿ 25 ಪ್ರಶ್ನೆಗಳನ್ನು ಕೇಳಿ ಫಾರ್ಮಾ ಸಂಸ್ಥೆಗಳನ್ನೇ ದಂಗು ಬಡಿಸಿದ್ದಾರೆ.
Yoga guru Ramdev has been served a defamation notice by the Indian Medical Association’s (IMA’s) Uttarakhand division for his recent statements questioning the efficacy of allopathy medicines.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 07:20 pm
HK News Staffer
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm