ಬ್ರೇಕಿಂಗ್ ನ್ಯೂಸ್
26-05-21 08:57 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 26: ಅಲೋಪತಿ ವೈದ್ಯಕೀಯವೇ ಸುಳ್ಳು, ಮೂರ್ಖ ವಿಜ್ಞಾನ ಎಂದು ಹೇಳಿಕೆ ನೀಡಿದ್ದ ಪತಂಜಲಿ ಗುರು ಬಾಬಾ ರಾಮದೇವ್ ವಿರುದ್ಧ ಐಎಂಎ ಒಂದು ಸಾವಿರ ಕೋಟಿ ರೂ. ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ಹೂಡುವ ಬೆದರಿಕೆ ಹಾಕಿದೆ. ತಮ್ಮ ಹೇಳಿಕೆಯ ಬಗ್ಗೆ 15 ದಿನಗಳಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಈ ಬಗ್ಗೆ ಸಾವಿರ ಕೋಟಿ ಪರಿಹಾರಕ್ಕಾಗಿ ಪ್ರಕರಣ ದಾಖಲಿಸುತ್ತೇವೆ ಎಂದು ಉತ್ತರಾಖಂಡ ರಾಜ್ಯ ಐಎಂಎ ಘಟಕ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಬಾಬಾ ರಾಮದೇವ್ ವಿರುದ್ಧ ಆರು ಪುಟಗಳ ನೋಟೀಸ್ ನೀಡಿರುವ ಉತ್ತರಾಖಂಡ ಐಎಂಎ ಘಟಕದ ಕಾರ್ಯದರ್ಶಿ ಅಜಯ್ ಖನ್ನಾ, ರಾಮದೇವ್ ಅಲೋಪತಿ ವೈದ್ಯರನ್ನು ಅವಮಾನಿಸಿದ್ದಾರೆ. ನಮ್ಮ ಘಟಕದ ಎರಡು ಸಾವಿರ ಮಂದಿ ಸದಸ್ಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.

15 ದಿನಗಳಲ್ಲಿ ಲಿಖಿತ ರೂಪದಲ್ಲಿ ಕ್ಷಮೆ ಯಾಚಿಸದಿದ್ದರೆ ಯೋಗಗುರು ವಿರುದ್ಧ ಸೆಕ್ಷನ್ 499 ಪ್ರಕಾರ ಕ್ರಿಮಿನಲ್ ಕೇಸು ದಾಖಲು ಮಾಡುತ್ತೇವೆ. ಪ್ರತೀ ಸದಸ್ಯನಿಗೆ 50 ಲಕ್ಷ ರೂ.ನಂತೆ ಒಂದು ಸಾವಿರ ಕೋಟಿ ರೂಪಾಯಿ ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇವೆ ಎಂದು ವಕೀಲರ ಮೂಲಕ ಹೇಳಿದ್ದಾರೆ.
ಇದೇ ವೇಳೆ, ಪತಂಜಲಿಯಿಂದ ನೀಡಲಾಗುತ್ತಿರುವ ಕೊರೊನಿಲ್ ಕಿಟ್ ಬಗ್ಗೆಯೂ ಐಎಂಎ ಆಕ್ಷೇಪ ಎತ್ತಿದೆ. ಕೊರೊನಾಗೆ ಔಷಧಿ ಎನ್ನುವ ರೀತಿ ಬಿಂಬಿಸಿ ಜಾಹೀರಾತು ನೀಡಲಾಗಿದೆ. ಅದನ್ನೂ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದರ ವಿರುದ್ಧವೂ ಎಫ್ಐಆರ್ ದಾಖಲು ಮಾಡುತ್ತೀವಿ ಎಂದು ಎಚ್ಚರಿಸಲಾಗಿದೆ.
ಅಲೋಪತಿ ವೈದ್ಯರು ಮತ್ತು ಫಾರ್ಮಾ ಕಂಪನಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಾಬಾ ರಾಮದೇವ್, 25 ಪ್ರಶ್ನೆಗಳನ್ನು ಮುಂದಿಟ್ಟು ಅಲೋಪತಿ ವೈದ್ಯಕೀಯ ವಿಜ್ಞಾನವನ್ನೇ ಅಣಕಿಸಿದ್ದಾರೆ. ಅಲೋಪತಿಯಲ್ಲಿ ಮಧುಮೇಹ, ಬಿಪಿಗಳಿಗೆ ಶಾಶ್ವತ ಪರಿಹಾರ ಇದೆಯೇ, ಸಂಧಿವಾತ, ಥೈರಾಯ್ಡ್, ಅಸ್ತಮಾಗೆ ಶಾಶ್ವತ ಚಿಕಿತ್ಸೆ ಇದೆಯೇ, ಹೆಪಟೈಟಿಸ್, ಪಿತ್ತ ಜನಕಾಂಗದ ಸಿರೋಸಿಸ್ ಗುಣಪಡಿಸುವ ಚಿಕಿತ್ಸೆ ಇದೆಯೇ, ತಲೆನೋವು, ಮೈಗ್ರೇನ್ ಗೆ ಶಾಶ್ವತ ಪರಿಹಾರ ಇದೆಯೇ, ಪಾರ್ಕಿನ್ಸನ್ ಕಾಯಿಲೆಗೆ ಶಾಶ್ವತ ಚಿಕಿತ್ಸೆ ಇದೆಯೇ ಇತ್ಯಾದಿ 25 ಪ್ರಶ್ನೆಗಳನ್ನು ಕೇಳಿ ಫಾರ್ಮಾ ಸಂಸ್ಥೆಗಳನ್ನೇ ದಂಗು ಬಡಿಸಿದ್ದಾರೆ.
Yoga guru Ramdev has been served a defamation notice by the Indian Medical Association’s (IMA’s) Uttarakhand division for his recent statements questioning the efficacy of allopathy medicines.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am