ಬ್ರೇಕಿಂಗ್ ನ್ಯೂಸ್
01-06-21 11:25 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1 : ಕೊರೋನಾ ವೈರಸ್ ನಿಯಂತ್ರಣ ವಿಚಾರದಲ್ಲಿ ಅಲೋಪತಿ ವೈದ್ಯ ವಿಜ್ಞಾನದ ವಿರುದ್ಧವೇ ಸಿಡಿದಿರುವ ಯೋಗಗುರು ಬಾಬಾ ರಾಮದೇವ್, ಅಲೋಪತಿ ವೈದ್ಯರ ಆಕ್ರೋಶದ ಮಧ್ಯೆಯೇ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಒಂದು ವರ್ಷದಲ್ಲಿ 1,000 ಅಲೋಪತಿ ವೈದ್ಯರನ್ನು ಆಯುರ್ವೇದಿಕ್ ವೈದ್ಯರನ್ನಾಗಿ ಪರಿವರ್ತಿಸುತ್ತೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಸೃಷ್ಟಿಸಿದ್ದಾರೆ.
ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಪಡೆದಿರುವ ಹಲವಾರು ಅಲೋಪತಿ ವೈದ್ಯರು, ಆರೋಗ್ಯ ಸಿಬ್ಬಂದಿಗಳು ಯೋಗ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ಈ ವರ್ಷದೊಳಗೆ ಸಾವಿರಕ್ಕೂ ಹೆಚ್ಚು ಅಲೋಪಥಿ ವೈದ್ಯರನ್ನು ಆಯುರ್ವೇದಕ್ಕೆ ಕರೆತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲೋಪತಿ ಔಷಧಿಗಳಿಂದ ಸ್ವತಃ ವೈದ್ಯರೇ ಅಡ್ಡ ಪರಿಣಾಮ ಎದುರಿಸಿದ್ದಾರೆ. ಹೀಗಾಗಿ ಯೋಗ, ಆಯುರ್ವೇದದತ್ತ ಆಕರ್ಷಿತರಾಗಿ ಗುಣಮುಖರಾಗಿದ್ದಾರೆ. ಜೀವನದಲ್ಲಿ ನೆಮ್ಮದಿ ಕಂಡುಕೊಂಡಿದ್ದಾರೆ. ಈಗಾಗಲೇ ಹಲವು ಅಲೋಪಥಿ ವೈದ್ಯರು ತಮ್ಮ ಯೋಗ, ಆಯುರ್ವೇದತ್ತ ಹೊರಳುತ್ತಿದ್ದಾರೆ ಎಂದು ರಾಮದೇವ್ ಹೇಳಿದ್ದಾರೆ.
ಅಲ್ಲದೆ, ಮುಂದಿನ ಒಂದು ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಅಲೋಪತಿ ವೈದ್ಯರನ್ನು ಪ್ರಕೃತಿ ಚಿಕಿತ್ಸಾ ವೈದ್ಯರನ್ನಾಗಿ ಪರಿವರ್ತಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ರಾಮ್ದೇವ್ ಹೇಳಿದರು.
ಆಲೋಪಥಿ ಮೂರ್ಖರ ವಿಜ್ಞಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಾಬಾ ರಾಮ್ದೇವ್ ವಿರುದ್ಧ ವೈದ್ಯರ ಫೆಡರೇಶನ್, ಭಾರತೀಯ ವೈದ್ಯಕೀಯ ಸಂಘ ಸೇರಿದಂತೆ ಅಲೋಪತಿ ವೈದ್ಯರು ಜೂನ್ 1 ರಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿರುವಾಗಲೇ ರಾಮದೇವ್ ಮತ್ತೊಂದು ಸವಾಲು ಹಾಕಿದ್ದಾರೆ.
As the controversy over his comments against allopathic medicines and doctors is drawing severe ire, yoga guru Baba Ramdev said during a yoga session that he has a target of converting 1,000 allopathic doctors to Ayurveda in a year's time.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am