ಬ್ರೇಕಿಂಗ್ ನ್ಯೂಸ್
01-06-21 04:21 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1: ದೇಶದ ಹಲವು ರಾಜ್ಯಗಳಲ್ಲಿ ಪೂರ್ತಿಯಾಗಿ ಲಾಕ್ಡೌನ್ ಇದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ನೂರರ ಗಡಿದಾಟಿದ್ದು ಇತಿಹಾಸದಲ್ಲೇ ಅತ್ಯಂತ ಗರಿಷ್ಠ ದರಕ್ಕೆ ತಲುಪಿದೆ.
ಪೆಟ್ರೋಲ್ ಮತ್ತು ಡೀಸೆಲ್ ಗೆ ಇಂದು ಕ್ರಮವಾಗಿ 26 ಮತ್ತು 23 ಪೈಸೆ ಏರಿಕೆಯಾಗಿದ್ದು, ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.49 ಹಾಗೂ ಡೀಸೆಲ್ ಬೆಲೆ ರೂ. 85.38 ಆಗಿದೆ. ಸ್ವಲ್ಪ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ತೈಲ ಬೆಲೆಯನ್ನು ಎರಡು ದಿನಗಳಲ್ಲಿ ದಿನವೂ ಏರಿಸಲಾಗಿದೆ. ಸೋಮವಾರ 29 ಪೈಸೆ ಏರಿಕೆಯಾಗಿದ್ದರೆ, ಇಂದು ಮತ್ತೆ ದರ ಏರಿದ್ದು ಸಾರ್ವಕಾಲಿಕ ದಾಖಲೆಯನ್ನು ದಾಟಿ ಮುನ್ನುಗ್ಗಿದೆ.


ಮುಂಬೈ ಮಹಾನಗರದಲ್ಲಿ ಇಂದು ಪೆಟ್ರೋಲ್ ದರ 100.72 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರಿಗೆ 92.39 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವೂ ದೇಶದಲ್ಲೇ ಅತಿ ಹೆಚ್ಚು ದರ ಮುಂಬೈನಲ್ಲಿ ದಾಖಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಬಕಾರಿ ಸುಂಕ ವ್ಯತ್ಯಾಸ ಇರುವುದರಿಂದ ತೈಲ ಬೆಲೆಯೂ ಆಯಾ ಭಾಗದ ತೆರಿಗೆಯನ್ನು ಹೊಂದಿಕೊಂಡು ಬೇರೆ ಬೇರೆಯಾಗಿದೆ. ಸ್ಥಳೀಯ ಸುಂಕ ಹೆಚ್ಚಿರುವ ಕಾರಣದಿಂದ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ವಿವಿಧ ನಗರಗಳಲ್ಲಿ ವಾರದ ಹಿಂದೆಯೇ ಪೆಟ್ರೋಲ್ ದರ ನೂರು ರೂ. ದಾಟಿತ್ತು.


ಇದೀಗ ಸೋಮವಾರ ಮತ್ತು ಮಂಗಳವಾರ ಎರಡು ದಿನವೂ ತೈಲ ಬೆಲೆ 50 ಪೈಸೆ ಏರಿಕೆಯಾಗಿರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ತಲುಪಿದೆ. ಮೇ 1ರಿಂದ 15 ದಿನಗಳ ಕಾಲ ತೈಲ ಬೆಲೆಯಲ್ಲಿ ಸ್ಥಿರತೆ ಇದ್ದು, ಯಾವುದೇ ಬದಲಾವಣೆ ಆಗಿರಲಿಲ್ಲ. ಆನಂತರ ಸರದಿಯಂತೆ ಏರಿಸಿಕೊಂಡು ಬರಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲಿಗೆ 4.09 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 4.66 ರೂ. ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರಲಿಗೆ 70 ಡಾಲರ್ ಗೆ ತಲುಪಿದ್ದು ಇದರಿಂದಾಗಿ ತೈಲ ಕಂಪನಿಗಳು ಹೊರಗಿನ ಪೂರೈಕೆಗೆ ತಕ್ಕಂತೆ ದರವನ್ನೂ ಏರಿಕೆ ಮಾಡುತ್ತಿದ್ದು ಇದರ ನೇರ ಹೊರೆ ಜನರ ಮೇಲೆ ಬೀಳುತ್ತಿದೆ.
Petrol and diesel rates have been hiked for a second consecutive day. The fresh hike comes after consolidation in global crude oil rates, which also indicates that state-run oil companies may continue to hike fuel prices for a longer period.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am