ಬ್ರೇಕಿಂಗ್ ನ್ಯೂಸ್
05-06-21 05:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಹಂತ ಹಂತವಾಗಿ ಲಾಕ್ಡೌನ್ ತೆರವುಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ತಿಳಿಸಿದರು.
ಆನ್ಲೈನ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಬಂಧ ಸಡಿಲಗೊಳಿಸಿ ಹೊರಡಿಸಿರುವ ಆದೇಶ ಸೋಮವಾರದಿಂದ ಜಾರಿಗೆ ಬರಲಿದೆ. ಆ ಪ್ರಕಾರ, ಶೇ 50ರ ಪ್ರಯಾಣಿಕರೊಂದಿಗೆ ಮೆಟ್ರೊ ರೈಲು ಸಂಚಾರ ಮಾಡಲಿದೆ. ಸರಿ–ಬೆಸ ಸಂಖ್ಯೆಯ ಆಧಾರದಲ್ಲಿ ಮಾರುಕಟ್ಟೆಗಳು ಮತ್ತು ಮಾಲ್ಗಳು ತೆರೆಯಬೇಕೆಂದು ನಿಬಂಧನೆ ವಿಧಿಸಲಾಗಿದೆ ಎಂದು ತಿಳಿಸಿದರು.
ಸೋಮವಾರ ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಬೇಕಿದ್ದ ದೆಹಲಿಯ ಲಾಕ್ಡೌನ್ ಅನ್ನು ಕೆಲವೊಂದು ನಿಯಮಗಳನ್ನು ಸಡಿಸಲಿಸುವುದರೊಂದಿಗೆ ವಿಸ್ತರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

ಶೇ. 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರಯಲು ಅವಕಾಶ ನೀಡಲಾಗುವುದು. ಬೆಳಿಗ್ಗೆ 10 ರಿಂದ ರಾತ್ರಿ 8ರವರೆಗೆ ಬೆಸ-ಸಮ ಆಧಾರದಲ್ಲಿ ಮಾರುಕಟ್ಟೆಗಳು ಮತ್ತು ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದರು.
ನಿತ್ಯ 37 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಜತೆಗೆ, ದೆಹಲಿಯ ಆಸ್ಪತ್ರೆಯಲ್ಲಿರುವ ಐಸಿಯುಗಳ ಲಭ್ಯತೆ ಮತ್ತು ಔಷಧಗಳ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಕೊರೊನಾ ಮೂರನೇ ಅಲೆ ಎದುರಿಸಲು ದೆಹಲಿ ಸರ್ಕಾರ ಸಜ್ಜಾಗುತ್ತಿದೆ ಎಂದು ಹೇಳಿದರು.

‘ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದೆಂಬ ತಜ್ಞರ ಹೇಳಿಕೆಗಳ ಹಿನ್ನೆಲೆಯಲ್ಲಿ, ಮಕ್ಕಳಿಗೆ ಅಗತ್ಯವಿರುವ ಹಾಸಿಗೆಗಳು, ಐಸಿಯು ಸೌಲಭ್ಯಗಳು ಮತ್ತು ಇತರ ಉಪಕರಣಗಳ ವ್ಯವಸ್ಥೆಗಾಗಿ ‘ಮಕ್ಕಳ ಕಾರ್ಯಪಡೆ‘ ರಚಿಸಲಾಗಿದೆ‘ ಎಂದು ಅವರು ಮಾಹಿತಿ ನೀಡಿದರು.
ದೆಹಲಿಯಲ್ಲಿ 450 ಮೆಟ್ರಿಕ್ ಟನ್ ಆಮ್ಲಜನಕ ಸಂಗ್ರಹಿವಷ್ಟು ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ. 25 ಆಮ್ಲಜನಕ ಟ್ಯಾಂಕರ್ಗಳನ್ನು ಸರ್ಕಾರ ಖರೀದಿಸುತ್ತಿದೆ. 64 ಸಣ್ಣ ಆಮ್ಲಜನಕ ಘಟಕಗಳನ್ನು ಸ್ಥಾಪಿಸುತ್ತಿದೆ. ಕೋವಿಡ್ಗೆ ಚಿಕಿತ್ಸೆಗೆ ಸಂಬಂಧಿಸಿದ ಔಷಧಿಗಳ ದಾಸ್ತಾನು ಮಾಡುವುದಕ್ಕೂ ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದರು.
Delhi Chief Minister Arvind Kejriwal has announced further relaxations in lockdown. As per the announcement made on Saturday, markets will re-open in Delhi, and metro services will be resumed from June 7 with conditions.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am