ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.

ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm