ಬ್ರೇಕಿಂಗ್ ನ್ಯೂಸ್
01-08-20 06:55 am Headline Karnataka News Network ದೇಶ - ವಿದೇಶ
ಅಲಾಸ್ಕ, ಆ 01: ವಿಮಾನಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಶಾಸಕ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ಅಮೆರಿಕದ ಅಲಾಸ್ಕದ ಕೆನೈ ಪೆನಿನ್ಸುಲಾದ ಸೋಲ್ಡೊಟ್ನಾ ನಗರದ ವಿಮಾನ ನಿಲ್ದಾಣದ ಸಮೀಪದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಪತನದಲ್ಲಿ ಮೃತಪಟ್ಟವರನ್ನು ಶಾಸಕ ಗ್ಯಾರಿ ನೂಪ್, ಪೈಲಟ್ ಗ್ರೆಗೋರಿ ಬೆಲ್ (67), ಗೈಡ್ ಡೇವಿಡ್ ರೋಜರ್ಸ್ (40) ಮತ್ತು ಸೌಥ್ ಕರೊಲಿನಾ ಪ್ರವಾಸಿಗರಾದ ಕಲೆಬ್ ಹಸ್ಲಿ (26), ಹೆದರ್ ಹಸ್ಲಿ (25), ಮೆಕಾಯ್ ಹಸ್ಲಿ (24) ಮತ್ತು ಕ್ರಿಸ್ಟಿ ರೈಟ್ (23) ಎಂದು ಗುರುತಿಸಲಾಗಿದೆ.
ಎರಡು ವಿಮಾನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯಾರೂ ಕೂಡಾ ಬದುಕುಳಿದಿಲ್ಲ. ಅಲಾಸ್ಕಾ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಗ್ಯಾರಿ ನೂಪ್ ವಿಮಾನವೊಂದರಲ್ಲಿ ಏಕಾಂಗಿಯಾಗಿ ವಾಪಾಸ್ಸಾಗುತ್ತಿದ್ದರು. ಇನ್ನೊಂದು ವಿಮಾನವು ಅಲಾಸ್ಕಾ ಕಡೆಗೆ ಸೌಥ್ ಕರೊನಾದಿಂದ ಬರುತ್ತಿದ್ದು, ಈ ವಿಮಾನದಲ್ಲಿ ನಾಲ್ಕು ಪ್ರವಾಸಿಗರು ಸೇರಿದಂತೆ ಓರ್ವ ಗೈಡ್ ಮತ್ತು ಪೈಲಟ್ ಇದ್ದರು.
ಮಾಯು ಮಾರ್ಗದ ನಡುವೆ ಎರಡು ವಿಮಾನಗಳ ಮುಖಾಮುಖಿ ಡಿಕ್ಕಿಯ ಪರಿಣಾಮ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಓರ್ವನನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಮೃತ ಶಾಸಕ ಗ್ಯಾರಿ ನೂಪ್ ಅವರು ಓರ್ವ ರಿಪಬ್ಲಿಕನ್ ಹಾಗೂ ರಾಜ್ಯ ಸದನದ ಉಭಯ ಪಕ್ಷೀಯ ಬಹುಮತದ ಸದಸ್ಯರಾಗಿದ್ದರು. ಇವರ ಈ ದುರಂತ ಸಾವಿಗೆ ಹಲವಾರ ಸಹೋದ್ಯೋಗಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇವರು ತಮ್ಮ ಪ್ರದೇಶದ ಅಭಿವೃದ್ದಿಗಾಗಿ ದುಡಿಯುತ್ತಿದ್ದು, ಇಂತಹ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಹೋದ್ಯೋಗಿಗಳು ದುಃಖಿತರಾಗಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
2019ರ ಮೇ ತಿಂಗಳಿನಲ್ಲಿ ಕೆಟ್ಟಿಕನ್ ಬಳಿ ವಿಮಾನಗಳ ಡಿಕ್ಕಿ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm