ಬ್ರೇಕಿಂಗ್ ನ್ಯೂಸ್
01-08-20 06:55 am Headline Karnataka News Network ದೇಶ - ವಿದೇಶ
ಅಲಾಸ್ಕ, ಆ 01: ವಿಮಾನಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಶಾಸಕ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ಅಮೆರಿಕದ ಅಲಾಸ್ಕದ ಕೆನೈ ಪೆನಿನ್ಸುಲಾದ ಸೋಲ್ಡೊಟ್ನಾ ನಗರದ ವಿಮಾನ ನಿಲ್ದಾಣದ ಸಮೀಪದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಪತನದಲ್ಲಿ ಮೃತಪಟ್ಟವರನ್ನು ಶಾಸಕ ಗ್ಯಾರಿ ನೂಪ್, ಪೈಲಟ್ ಗ್ರೆಗೋರಿ ಬೆಲ್ (67), ಗೈಡ್ ಡೇವಿಡ್ ರೋಜರ್ಸ್ (40) ಮತ್ತು ಸೌಥ್ ಕರೊಲಿನಾ ಪ್ರವಾಸಿಗರಾದ ಕಲೆಬ್ ಹಸ್ಲಿ (26), ಹೆದರ್ ಹಸ್ಲಿ (25), ಮೆಕಾಯ್ ಹಸ್ಲಿ (24) ಮತ್ತು ಕ್ರಿಸ್ಟಿ ರೈಟ್ (23) ಎಂದು ಗುರುತಿಸಲಾಗಿದೆ.
ಎರಡು ವಿಮಾನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯಾರೂ ಕೂಡಾ ಬದುಕುಳಿದಿಲ್ಲ. ಅಲಾಸ್ಕಾ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಗ್ಯಾರಿ ನೂಪ್ ವಿಮಾನವೊಂದರಲ್ಲಿ ಏಕಾಂಗಿಯಾಗಿ ವಾಪಾಸ್ಸಾಗುತ್ತಿದ್ದರು. ಇನ್ನೊಂದು ವಿಮಾನವು ಅಲಾಸ್ಕಾ ಕಡೆಗೆ ಸೌಥ್ ಕರೊನಾದಿಂದ ಬರುತ್ತಿದ್ದು, ಈ ವಿಮಾನದಲ್ಲಿ ನಾಲ್ಕು ಪ್ರವಾಸಿಗರು ಸೇರಿದಂತೆ ಓರ್ವ ಗೈಡ್ ಮತ್ತು ಪೈಲಟ್ ಇದ್ದರು.
ಮಾಯು ಮಾರ್ಗದ ನಡುವೆ ಎರಡು ವಿಮಾನಗಳ ಮುಖಾಮುಖಿ ಡಿಕ್ಕಿಯ ಪರಿಣಾಮ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಓರ್ವನನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಮೃತ ಶಾಸಕ ಗ್ಯಾರಿ ನೂಪ್ ಅವರು ಓರ್ವ ರಿಪಬ್ಲಿಕನ್ ಹಾಗೂ ರಾಜ್ಯ ಸದನದ ಉಭಯ ಪಕ್ಷೀಯ ಬಹುಮತದ ಸದಸ್ಯರಾಗಿದ್ದರು. ಇವರ ಈ ದುರಂತ ಸಾವಿಗೆ ಹಲವಾರ ಸಹೋದ್ಯೋಗಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇವರು ತಮ್ಮ ಪ್ರದೇಶದ ಅಭಿವೃದ್ದಿಗಾಗಿ ದುಡಿಯುತ್ತಿದ್ದು, ಇಂತಹ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಹೋದ್ಯೋಗಿಗಳು ದುಃಖಿತರಾಗಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
2019ರ ಮೇ ತಿಂಗಳಿನಲ್ಲಿ ಕೆಟ್ಟಿಕನ್ ಬಳಿ ವಿಮಾನಗಳ ಡಿಕ್ಕಿ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm