ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.
ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.
ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm