ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.

ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm