ಬ್ರೇಕಿಂಗ್ ನ್ಯೂಸ್
10-06-21 08:29 pm Headline Karnataka News Network ದೇಶ - ವಿದೇಶ
ಲಕ್ನೋ, ಜೂ. 10: ''ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು, ಅದು ಅತ್ಯಾಚಾರಗಳಿಗೆ ಕಾರಣವಾಗುತ್ತದೆ'' ಎಂಬ ವಿವಾದಾತ್ಮಕ ಹೇಳಿಕೆಯನ್ನು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯೆ ನೀಡಿದ್ದಾರೆ. ಅಲಿಗಢ ಜಿಲ್ಲೆಯ ಮಹಿಳೆಗೆ ಸಂಬಂಧಿಸಿದ ದೂರಿನ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ಮೀನಾ ಕುಮಾರಿ ಈ ಹೇಳಿಕೆ ನೀಡಿದ್ದಾರೆ.
ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು. ಹುಡುಗಿಯರು ಹುಡುಗರೊಂದಿಗೆ ಗಂಟೆಗಟ್ಟಲೆ ಫೋನ್ಗಳಲ್ಲಿ ಮಾತನಾಡುತ್ತಾರೆ. ಬಳಿಕ ಹುಡುಗರೊಂದಿಗೆ ಓಡಿಹೋಗುತ್ತಾರೆ. ಹುಡುಗಿಯರ ಫೋನ್ಗಳನ್ನು ಕೂಡಾ ಈ ಪರಿಶೀಲನೆ ಮಾಡಲಾಗುತ್ತಿಲ್ಲ. ಕುಟುಂಬ ಸದಸ್ಯರಿಗೆ ಈ ವಿಚಾರದ ಅರಿವೇ ಇರುವುದಿಲ್ಲ" ಎಂದು ಯುಪಿ ಮಹಿಳಾ ಆಯೋಗದ ಸದದ್ಯೆ ಮೀನಾ ಕುಮಾರಿ ಹೇಳಿದ್ದಾರೆ.

ಮಹಿಳೆಯರ ಮೇಲಿನ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಸಮಾಜವೇ ಗಂಭೀರವಾಗಿರಬೇಕು. ಪೋಷಕರು, ವಿಶೇಷವಾಗಿ ತಾಯಂದಿರು ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದಾರೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಮೇಲೆ ನಿಗಾವಹಿಸಬೇಕು. ಈ ವಿಚಾರದಲ್ಲಿ ತಾಯಂದಿರಿಗೆ ದೊಡ್ಡ ಜವಾಬ್ದಾರಿ ಇದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಬಗ್ಗೆ ಅಸಡ್ಡೆ ಹೊಂದಿದ್ದರೆ, ಮುಂದಿನ ಪರಿಣಾಮಕ್ಕೆ ತಾಯಂದಿರೇ ಜವಾಬ್ದಾರರು" ಎಂದಿದ್ದಾರೆ.
ಆದರೆ ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಯೋಗದ ಉಪಾಧ್ಯಕ್ಷೆ ಅಂಜು ಚೌಧರಿ, ''ಹೆಣ್ಣು ಮಕ್ಕಳಿಗೆ ಮೊಬೈಲ್ ಫೋನ್ ನೀಡದಿರುವುದು ಲೈಂಗಿಕ ದೌರ್ಜನ್ಯವನ್ನು ಕೊನೆಗೊಳಿಸಲು ಇರುವ ಉಪಾಯವಲ್ಲ, ಇದು ಪರಿಹಾರವೂ ಅಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.
ಜನವರಿಯಲ್ಲಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ ಬಾದೌನ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ತಮ್ಮ ಅಭಿಪ್ರಾಯ ನೀಡುವ ಸಂದರ್ಭ ಈ ರೀತಿಯೇ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ''ಮಹಿಳೆಯರು ಸಂಜೆ ಹೊರಗೆ ಹೋಗದಿದ್ದರೆ ಈ ಘಟನೆಯನ್ನು ತಪ್ಪಿಸಬಹುದಿತ್ತು'' ಎಂದು ಕೂಡಾ ಹೇಳಿದ್ದರು. ಈ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಚಂದ್ರಮುಖಿ ದೇವಿ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದರು.
A member of Uttar Pradesh Women's Commission has said that girls should not be given mobile phones as it leads to rape. During a Mahila Jansunwai (public hearing of women-related complaints) in Aligarh on Wednesday, the member said, “Girls talk on phones and later run away with boys….”
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm