ಬ್ರೇಕಿಂಗ್ ನ್ಯೂಸ್
12-06-21 05:23 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ದೆಹಲಿಯಲ್ಲಿ ಕೊರೊನಾ ಮೂರನೇ ಅಲೆ ಶುರುವಾಗುವ ಸಾಧ್ಯತೆ ಇದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಕೇಜ್ರಿವಾಲ್ ಆನ್ಲೈನ್ ಮೂಲಕ ದೆಹಲಿಯಾದ್ಯಂತ ಒಂಬತ್ತು ಆಸ್ಪತ್ರೆಗಳಲ್ಲಿ 22 ಹೊಸ ಪಿಎಸ್ಎ ಆಮ್ಲಜನಕ ಘಟಕಗಳನ್ನು ಜಂಟಿಯಾಗಿ ಉದ್ಘಾಟಿಸಿದರು.
ಕೋವಿಡ್ ವಿರುದ್ಧ ಹೋರಾಡಲು ನಮ್ಮ ಸಿದ್ಧತೆಗಳನ್ನು ಬಲಪಡಿಸಲು ದೆಹಲಿಯಾದ್ಯಂತದ ಒಂಬತ್ತು ಆಸ್ಪತ್ರೆಗಳಲ್ಲಿನ ಈ ಹೊಸ ಆಮ್ಲಜನಕ ಘಟಕಗಳನ್ನು ಇಂದು ಸೇರಿಸಲಾಗಿದೆ ಎಂದರು.
ನಂತರ ತಮ್ಮ ಭಾಷಣದಲ್ಲಿ 'ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಸಾಧ್ಯತೆಗಳು ಹೆಚ್ಚಿದೆ ಎಂದು ಎಚ್ಚರಿಸಿದ್ದಾರೆ. ಹೀಗಾಗಿ ನಾವು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ನಮ್ಮ ಸರ್ಕಾರವು ಅದನ್ನು ಎದುರಿಸಲು ಯುದ್ಧದ ಹಾದಿಯಲ್ಲಿ ತಯಾರಿ ನಡೆಸುತ್ತಿದೆ ಎಂದು ಹೇಳಿದರು.
'ಕೋವಿಡ್ ಮೂರನೇ ಅಲೆ ನಮ್ಮನ್ನು ಹೊಡೆಯಬಾರದು ಎಂದು ನಾವು ಪ್ರಾರ್ಥಿಸುತ್ತೇವೆ. ಆದರೆ ಅದು ಸಂಭವಿಸಿದಲ್ಲಿ, ದೆಹಲಿ ಮತ್ತೆ ಒಟ್ಟಾಗಿ ಹೋರಾಡಬೇಕಾಗಿದೆ' ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬ್ರಿಟನ್ನಿಂದ ಮೂರನೇ ಅಲೆಯ ಸೂಚನೆಗಳು ಬರುತ್ತಿವೆ. ಶೇಕಡಾ 45ರಷ್ಟು ವ್ಯಾಕ್ಸಿನೇಷನ್ ಹೊರತಾಗಿಯೂ ಪ್ರಕರಣಗಳು ಅಲ್ಲಿ ಹೆಚ್ಚುತ್ತಿವೆ. ಆದ್ದರಿಂದ, ನಾವು ಸುಮ್ಮನೆ ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿದರು. ಮೂರನೇ ಅಲೆಯ ಸಂದರ್ಭದಲ್ಲಿ ಕೋವಿಡ್ ವಿರುದ್ಧ ಹೋರಾಡಲು ವ್ಯವಸ್ಥೆಯನ್ನು ಸಜ್ಜುಗೊಳಿಸಲು ದೆಹಲಿ ಸರ್ಕಾರವು ಆಮ್ಲಜನಕ ಟ್ಯಾಂಕರ್ಗಳನ್ನು ಖರೀದಿಸುತ್ತಿದೆ.
ಕೋವಿಡ್ನ ಎರಡನೇ ಅಲೆಯನ್ನು ದೆಹಲಿಯ ಜನರು ಭುಜಕ್ಕೆ ಭುಜ ಕೊಟ್ಟು ಶಿಸ್ತಿನಿಂದ ಎದುರಿಸುತ್ತಾ ಬಂದಿದ್ದು ಯಶಸ್ವಿಯಾಗಿ ಹೋರಾಡಿದ್ದೇವೆ. ಅಲ್ಲದೆ ಕೈಗಾರಿಕಾ ವಲಯವು ನಮ್ಮ ಜೊತೆಗೂಡಿ ಹೋರಾಡಿದ್ದು ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
Delhi chief minister Arvind Kejriwal on Saturday cautioned that the chances of the third wave of the Covid-19 pandemic were quite real, while he asserted that his government was preparing on a "war-footing" to combat it.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm