ಬ್ರೇಕಿಂಗ್ ನ್ಯೂಸ್
13-06-21 01:44 pm Headline Karnataka News Network ದೇಶ - ವಿದೇಶ
ಪ್ರತಾಪಗಢ, ಜೂನ್ 13: ಕೊರೊನಾ ಮಹಾಮಾರಿ ಇಡೀ ಜಗತ್ತಿಗೆ ಹೆಮ್ಮಾರಿಯಾಗಿ ಪರಿಣಮಿಸಿದ್ದರೆ, ಇಲ್ಲೊಂದು ಗ್ರಾಮದಲ್ಲಿ ಗ್ರಾಮಸ್ಥರೇ ಸೇರಿ ಕೊರೊನಾ ಮಾತೆಯ ಹೆಸರಲ್ಲಿ ಗುಡಿ ಕಟ್ಟಿ ಸುದ್ದಿಯಾಗಿದ್ದಾರೆ.
ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಜೂಹಿ ಶುಕಲ್ಪುರ್ ಗ್ರಾಮದಲ್ಲಿ ಗ್ರಾಮಸ್ಥರು ಸೇರಿ ಕೊರೊನಾ ಮಾತೆಗೆ ಗುಡಿ ಕಟ್ಟಿದ್ದಾರೆ. ಲೋಕೇಶ್ ಕುಮಾರ್ ಶ್ರೀವಾಸ್ತವ ಎಂಬಾತ ಗ್ರಾಮಸ್ಥರ ಸಹಕಾರದಲ್ಲಿ ಗುಡಿ ಕಟ್ಟಿದ್ದಾನೆ. ಕೊರೊನಾ ಮಾತೆಯ ಹೆಸರಲ್ಲಿ ವಿಗ್ರಹವನ್ನೂ ಸ್ಥಾಪನೆ ಮಾಡಿದ್ದ. ಗ್ರಾಮದ ನಿವಾಸಿ ರಾಧೇಶ್ಯಾಮ್ ವರ್ಮ ಎಂಬ ಅರ್ಚಕನನ್ನು ಕೊರೊನಾ ದೇವಿಯ ಪೂಜೆಗೆ ನೇಮಕ ಮಾಡಲಾಗಿತ್ತು. ಸ್ಥಳೀಯ ಜನರು ಕೊರೊನಾ ದೇವಿಯನ್ನು ಪೂಜಿಸಿ, ಜಗತ್ತಿಗೆ ಕವಿದ ಕತ್ತಲೆಯನ್ನು ನೀಗಿಸು ಎಂದು ಪ್ರಾರ್ಥಿಸಲು ತೊಡಗಿದ್ದರು.

ಆದರೆ, ಗುಡಿ ಕಟ್ಟಿ ನಾಲ್ಕು ದಿನಗಳಾಗುವಷ್ಟರಲ್ಲಿ ಜಾಗದ ವಾರೀಸುದಾರರು ತಕರಾರು ತೆಗೆದಿದ್ದಾರೆ. ಆ ಜಾಗ ನಾಗೇಶ್ ಕುಮಾರ್ ಶ್ರೀವಾಸ್ತವ ಮತ್ತು ಜೈ ಪ್ರಕಾಶ್ ಶ್ರೀವಾಸ್ತವ ಎಂಬವರಿಗೆ ಸೇರಿದ್ದೆಂದು ಅವರು ಪೊಲೀಸ್ ದೂರು ನೀಡಿದ್ದಾರೆ. ಇಷ್ಟಾಗುತ್ತಿದ್ದಂತೆ ಗುಡಿ ಕಟ್ಟಲು ಮುಂಚೂಣಿಯಲ್ಲಿ ನಿಂತಿದ್ದ ಲೋಕೇಶ್ ಕುಮಾರ್ ನಾಪತ್ತೆಯಾಗಿದ್ದಾನೆ. ಲೋಕೇಶ್ ಇದೇ ಊರಿನ ವ್ಯಕ್ತಿಯಾಗಿದ್ದರೂ, ದೆಹಲಿ ಸಮೀಪದ ನೋಯ್ಡಾದಲ್ಲಿ ನೆಲೆಸಿದ್ದ.
ತಮ್ಮ ಜಾಗವನ್ನು ಕಬಳಿಸಲು ಗುಡಿ ಕಟ್ಟಲಾಗಿದೆ ಎಂದು ನಾಗೇಶ್ ಮತ್ತು ಸೋದರ ಪೊಲೀಸರಿಗೆ ದೂರು ನೀಡಿದ್ದರು. ವಿವಾದಿತ ಜಾಗದಲ್ಲಿ ಗುಡಿ ಕಟ್ಟಲಾಗಿತ್ತು. ಗುಡಿ ನಿರ್ಮಾಣದಲ್ಲಿ ಈ ಜಾಗಕ್ಕೆ ಸೇರಿದ ವ್ಯಕ್ತಿಗಳು ಕೂಡ ಶಾಮೀಲಾಗಿದ್ದಾರೆ. ಗುಡಿಯ ಅಕ್ರಮ ನಿರ್ಮಾಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಸಂಗೀಪುರ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಆದರೆ, ಅತ್ತ ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಮತ್ತೊಂದು ಗುಂಪು ಕೊರೊನಾ ದೇವಿಯ ಗುಡಿಯನ್ನು ಒಡೆದು ಹಾಕಿದೆ.
People at Juhi Shukulpur village here built a "corona mata" temple, seeking divine grace to stay clear of the infection. However, the temple built on June 7 was demolished on Friday night.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am