ಬ್ರೇಕಿಂಗ್ ನ್ಯೂಸ್
14-06-21 11:03 am Headline Karnataka News Network ದೇಶ - ವಿದೇಶ
ಟೆಲ್ ಅವಿವ್, ಜೂನ್ 14: ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.
ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.

ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
Naftali Bennett was on Sunday sworn in as Israel's new Prime Minister, ending Benjamin Netanyahu's 12-year hold on power and the political uncertainty that gripped the Jewish nation for months after inconclusive elections.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am