ಬ್ರೇಕಿಂಗ್ ನ್ಯೂಸ್
14-06-21 09:48 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜೂ.14: ದೇಶದಲ್ಲಿ ಪ್ರಯಾಣ ನಿರ್ಬಂಧಗಳ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ದಂಪತಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಾಹ ನೋಂದಣಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಅರ್ಜಿದಾರರಾದ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ತಮ್ಮ ವಿವಾಹ ನೋಂದಣಿ ಮಾಡಬೇಕಾದರೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ಹಾಜರಿರಬೇಕು ಎಂದು ಸ್ಥಳೀಯ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ತಿಳಿಸಿದ್ದರು. ಈ ಹಿನ್ನೆಲೆ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ಹೈಕೋರ್ಟ್ ಕದ ತಟ್ಟಿದ್ದಾರೆ.
ಅರ್ಜಿದಾರರ ಪರ ವಕೀಲ ಜಾಕೋಬ್ ಪಿ. ಅಲೆಕ್ಸ್ ಪ್ರಕಾರ, ಅರ್ಜಿದಾರರು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ. ಪ್ರಸ್ತುತ ದಂಪತಿಗೆ ಮೂವರು ಮಕ್ಕಳಿದ್ದಾರೆ. ತಾತ್ಕಾಲಿಕ ವೀಸಾದ ಮೇಲೆ ಈ ದಂಪತಿ ಇತ್ತೀಚೆಗೆ ಯುಎಇಯಿಂದ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ವಲಸೆ ನಿಯಮದ ಬದಲಾವಣೆಯಿಂದಾಗಿ, ಈ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಜೋಡಿಯು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಾಹದ ನೋಂದಣಿಗೆ ಅವಕಾಶವಿದೆ ಎಂದು ತೀರ್ಪು ಹೇಳಿದೆ. ಅಲ್ಲದೆ, ಅರ್ಜಿದಾರರು ಹಾಜರುಪಡಿಸಿದ ಸಾಕ್ಷ್ಯಗಳಿಂದ ಪತಿ, ಪತ್ನಿ ಎಂಬುದು ಸಾಬೀತಾಗಿದೆ. ಮದುವೆಗಳ ನೋಂದಣಿಯನ್ನು ರಿಜಿಸ್ಟ್ರಾರ್ ಜನರಲ್ ಆಫ್ ಮ್ಯಾರೇಜ್ ನಡೆಸುತ್ತದೆ. ಆದರೆ ಈ ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಅರ್ಜಿದಾರರು ಆಸ್ಟ್ರೇಲಿಯಾದಿಂದ ಇಲ್ಲಿಗೆ ಬಂದು ಸಹಿ ಮಾಡುವುದು ಅಸಾಧ್ಯವೆಂದು ಕೋರ್ಟ್ ಗಮನಿಸಿದೆ.
ವಿವಾಹದ ರಿಜಿಸ್ಟ್ರಾರ್ ಅಧಿಕಾರಿ ಅಗತ್ಯವಿದ್ದಲ್ಲಿ, ಅರ್ಜಿದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತುಕತೆ ನಡೆಸಬಹುದಾಗಿದೆ. ಅರ್ಜಿದಾರರ ಡಿಜಿಟಲ್ ಸಹಿಯೊಂದಿಗಿನ ನಕಲನ್ನು ಇ-ಮೇಲ್ ಮೂಲಕ ಅಥವಾ ಕೊರಿಯರ್ ಮೂಲಕ ಪಡೆದುಕೊಳ್ಳಬೇಕು. ಬಳಿಕ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ಅರ್ಜಿದಾರರ ಮದುವೆಯನ್ನು ನೋಂದಾಯಿಸಿ ವಿವಾಹ ಪ್ರಮಾಣಪತ್ರವನ್ನು ಅರ್ಜಿದಾರರ ಪವರ್ ಆಫ್ ಅಟಾರ್ನಿ ಹೊಂದಿರುವವರಿಗೆ ನೀಡಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
Kerala High Court has permitted a couple residing in Australia to register their marriage under the Kerala Registration of Marriages (Common) via Video Conference.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm