ಬ್ರೇಕಿಂಗ್ ನ್ಯೂಸ್
14-06-21 09:48 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜೂ.14: ದೇಶದಲ್ಲಿ ಪ್ರಯಾಣ ನಿರ್ಬಂಧಗಳ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ದಂಪತಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಾಹ ನೋಂದಣಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಅರ್ಜಿದಾರರಾದ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ತಮ್ಮ ವಿವಾಹ ನೋಂದಣಿ ಮಾಡಬೇಕಾದರೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ಹಾಜರಿರಬೇಕು ಎಂದು ಸ್ಥಳೀಯ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ತಿಳಿಸಿದ್ದರು. ಈ ಹಿನ್ನೆಲೆ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ಹೈಕೋರ್ಟ್ ಕದ ತಟ್ಟಿದ್ದಾರೆ.
ಅರ್ಜಿದಾರರ ಪರ ವಕೀಲ ಜಾಕೋಬ್ ಪಿ. ಅಲೆಕ್ಸ್ ಪ್ರಕಾರ, ಅರ್ಜಿದಾರರು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ. ಪ್ರಸ್ತುತ ದಂಪತಿಗೆ ಮೂವರು ಮಕ್ಕಳಿದ್ದಾರೆ. ತಾತ್ಕಾಲಿಕ ವೀಸಾದ ಮೇಲೆ ಈ ದಂಪತಿ ಇತ್ತೀಚೆಗೆ ಯುಎಇಯಿಂದ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ವಲಸೆ ನಿಯಮದ ಬದಲಾವಣೆಯಿಂದಾಗಿ, ಈ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಜೋಡಿಯು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ.
ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಾಹದ ನೋಂದಣಿಗೆ ಅವಕಾಶವಿದೆ ಎಂದು ತೀರ್ಪು ಹೇಳಿದೆ. ಅಲ್ಲದೆ, ಅರ್ಜಿದಾರರು ಹಾಜರುಪಡಿಸಿದ ಸಾಕ್ಷ್ಯಗಳಿಂದ ಪತಿ, ಪತ್ನಿ ಎಂಬುದು ಸಾಬೀತಾಗಿದೆ. ಮದುವೆಗಳ ನೋಂದಣಿಯನ್ನು ರಿಜಿಸ್ಟ್ರಾರ್ ಜನರಲ್ ಆಫ್ ಮ್ಯಾರೇಜ್ ನಡೆಸುತ್ತದೆ. ಆದರೆ ಈ ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಅರ್ಜಿದಾರರು ಆಸ್ಟ್ರೇಲಿಯಾದಿಂದ ಇಲ್ಲಿಗೆ ಬಂದು ಸಹಿ ಮಾಡುವುದು ಅಸಾಧ್ಯವೆಂದು ಕೋರ್ಟ್ ಗಮನಿಸಿದೆ.
ವಿವಾಹದ ರಿಜಿಸ್ಟ್ರಾರ್ ಅಧಿಕಾರಿ ಅಗತ್ಯವಿದ್ದಲ್ಲಿ, ಅರ್ಜಿದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತುಕತೆ ನಡೆಸಬಹುದಾಗಿದೆ. ಅರ್ಜಿದಾರರ ಡಿಜಿಟಲ್ ಸಹಿಯೊಂದಿಗಿನ ನಕಲನ್ನು ಇ-ಮೇಲ್ ಮೂಲಕ ಅಥವಾ ಕೊರಿಯರ್ ಮೂಲಕ ಪಡೆದುಕೊಳ್ಳಬೇಕು. ಬಳಿಕ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ಅರ್ಜಿದಾರರ ಮದುವೆಯನ್ನು ನೋಂದಾಯಿಸಿ ವಿವಾಹ ಪ್ರಮಾಣಪತ್ರವನ್ನು ಅರ್ಜಿದಾರರ ಪವರ್ ಆಫ್ ಅಟಾರ್ನಿ ಹೊಂದಿರುವವರಿಗೆ ನೀಡಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
Kerala High Court has permitted a couple residing in Australia to register their marriage under the Kerala Registration of Marriages (Common) via Video Conference.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm