ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm