ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm