ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm