ಬ್ರೇಕಿಂಗ್ ನ್ಯೂಸ್
16-06-21 12:37 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 16: ಎರಡು ವರ್ಷಗಳ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಪಕ್ಕಾ ಆಗಿದೆ. ಇದಕ್ಕಾಗಿ ಕಳೆದ ಐದು ದಿನಗಳಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಕೇಂದ್ರದ ಸಂಪುಟ ಸಚಿವರು ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.
ಈಗಾಗ್ಲೇ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಅಮಿತ್ ಷಾ ಸಭೆ ನಡೆಸಿದ್ದಾರೆ. ಸುಮಾರು 30 ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರೆಂದು ತಿಳಿದುಬಂದಿದೆ. ಪ್ರಸ್ತುತ ಕೇಂದ್ರ ಸಂಪುಟದಲ್ಲಿ 28 ಸ್ಥಾನಗಳು ಖಾಲಿ ಇದ್ದು, ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೋರಿದ ದಕ್ಷತೆ ಆಧರಿಸಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ರಾಜ್ಯಗಳಿಂದ ಕೇಂದ್ರ ಸಂಪುಟದಲ್ಲಿ ಪ್ರಾತಿನಿಧ್ಯಕ್ಕೆ ಒತ್ತಡ ಹೆಚ್ಚಿದ್ದರಿಂದ ಸಂಪುಟ ವಿಸ್ತರಣೆಗೆ ಮೋದಿ ಕೈ ಹಾಕಿದ್ದಾರೆ ಎಂದು ಹೇಳಲಾಗಿದೆ. ಬಿಹಾರ ಸಿಎಂ ನಿತೀಶ್ ನೇತೃತ್ವದ ಜೆಡಿಯು ಕೇಂದ್ರ ಸಂಪುಟದಲ್ಲಿ ಸ್ಥಾನಕ್ಕಾಗಿ ಮೊದಲಿನಿಂದಲೂ ಬೇಡಿಕೆ ಇಟ್ಟಿದೆ.


ಎಲ್ಜೆಪಿ ಪಕ್ಷದಿಂದಲೂ ಕೇಂದ್ರ ಸಂಪುಟ ಸೇರಲು ಬೇಡಿಕೆಯಿದೆ. ಇತ್ತ ಮಧ್ಯಪ್ರದೇಶದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿಗೆ ಜಿಗಿದ ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ಗೂ ಸಂಪುಟ ಸ್ಥಾನ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸಂಪುಟದ ಪುನಾರಚನೆಗೂ ಭಾರಿ ಲೆಕ್ಕಾಚಾರಗಳು ನಡೆಯುತ್ತಿವೆ. ಇತ್ತೀಚೆಗೆ ಪ್ರಧಾನಿ ಮೋದಿ ಜತೆ ಸಿಎಂ ಆದಿತ್ಯನಾಥ್ ಖುದ್ದು ಭೇಟಿ ಬಳಿಕ ಈ ಪ್ರಕ್ರಿಯೆ ಮತ್ತಷ್ಟು ವೇಗ ಪಡೆದಿದೆ.
Amit Shah had met MPs from Uttar Pradesh, Maharashtra, Rajasthan, Gujarat, and some other states on Saturday and Sunday at his residence.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm