ಬ್ರೇಕಿಂಗ್ ನ್ಯೂಸ್
31-08-20 12:36 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಆಗಸ್ಟ್ 31: ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ 80 ಸಾವಿರಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ರವಿವಾರ ವರದಿಯಾಗಿದ್ದು, ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಕೊರೊನದ ಇಷ್ಟೊಂದು ಪ್ರಕರಣಗಳು ಪತ್ತೆಯಾದ ನಿದರ್ಶನ ಇಲ್ಲ.
ಅಲ್ಪ ಇಳಿಕೆಯ ಬಳಿಕ ಪ್ರಗತಿ ದರ ಹಾಗೂ ಸೋಂಕಿತರ ಪೈಕಿ ಸಾವಿಗೀಡಾದವರ ದರ ಹೆಚ್ಚಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ದರ ದುಪ್ಪಟ್ಟಾಗಿದೆ. ಶನಿವಾರ ದೇಶಾದ್ಯಂತ 80,0092 ಪ್ರಕರಣಗಳು ದೃಢಪಟ್ಟಿದ್ದು, ವಾರಾಂತ್ಯದಲ್ಲಿ ಕಡಿಮೆ ತಪಾಸಣೆ ನಡೆಯುವ ಹಿನ್ನೆಲೆಯಲ್ಲಿ ಕಡಿಮೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದುವರೆಗೆ ವಾರಾಂತ್ಯದಲ್ಲಿ ಗರಿಷ್ಠ ಅಂದರೆ 63,851 ಪ್ರಕರಣಗಳು ಆಗಸ್ಟ್ 9ರಂದು ವರದಿಯಾಗಿದ್ದವು.

ಆತಂಕಕಾರಿ ವಿಚಾರವೆಂದರೆ ತಿಂಗಳ ಮೊದಲ ವಾರಗಳಲ್ಲಿ ಹೊಸ ಪ್ರಕರಣಗಳು ಹಾಗೂ ಪ್ರಗತಿ ದರ ಇಳಿಕೆ ಕಂಡುಬಂದಿದ್ದರೂ, ಕೊನೆಯ ವಾರ ಏರಿಕೆಯಾಗಿದೆ. ದೇಶದಲ್ಲಿ ಸತತ ಐದು ದಿನಗಳಿಂದ 76 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ವಾರದಲ್ಲಿ ಪ್ರಗತಿ ದರ 13.1% ಇದೆ. ಹಿಂದಿನ ವಾರ ದಾಖಲಾಗಿದ್ದ 4.7%ಕ್ಕೆ ಹೋಲಿಸಿದರೆ ಇದು ಮೂರು ಪಟ್ಟು. ಅದಕ್ಕಿಂತ ಹಿಂದಿನ ವಾರ 5.9% ಹಾಗೂ ಆಗಸ್ಟ್ ಮೊದಲ ವಾರ 10.9% ಪ್ರಗತಿದರ ದಾಖಲಾಗಿತ್ತು. ಅಂತೆಯೇ ಸತತ ನಾಲ್ಕನೇ ದಿನ ಸಾವಿರಕ್ಕೂ ಅಧಿಕ ಸಾವು ಸಂಭವಿಸಿದೆ. ಈ ವಾರ ಸಾವಿನ ಏರಿಕೆ ದರ ಶೇಕಡ 3.9ರಷ್ಟಿದ್ದು, ಹಿಂದಿನ ವಾರ ದಾಖಲಾದ ಶೇಕಡ 1.7ಕ್ಕೆ ಹೋಲಿಸಿದರೆ ಇದು ದ್ವಿಗುಣಗೊಂಡಿದೆ.
ಮಹಾರಾಷ್ಟ್ರ ಸತತ ಎರಡನೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಕಂಡಿದೆ. 16,408 ಮಂದಿಗೆ ಶನಿವಾರ ಸೋಂಕು ದೃಢಪಟ್ಟಿದ್ದು, ಉಳಿದಂತೆ ಉತ್ತರ ಪ್ರದೇಶ (6,233), ರಾಜಸ್ಥಾನ (1,450), ಮಧ್ಯಪ್ರದೇಶ (1,558), ಛತ್ತೀಸ್ಗಢ (1,471) ಮತ್ತು ಜಮ್ಮು ಮತ್ತು ಕಾಶ್ಮೀರ (786) ಹೀಗೆ ಐದು ರಾಜ್ಯಗಳು ಶನಿವಾರ ಇದುವರೆಗಿನ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ದೇಶದಲ್ಲಿ ರವಿವಾರ 970 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 64,550ಕ್ಕೇರಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm