ಬ್ರೇಕಿಂಗ್ ನ್ಯೂಸ್
31-08-20 12:36 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಆಗಸ್ಟ್ 31: ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ 80 ಸಾವಿರಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ರವಿವಾರ ವರದಿಯಾಗಿದ್ದು, ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಕೊರೊನದ ಇಷ್ಟೊಂದು ಪ್ರಕರಣಗಳು ಪತ್ತೆಯಾದ ನಿದರ್ಶನ ಇಲ್ಲ.
ಅಲ್ಪ ಇಳಿಕೆಯ ಬಳಿಕ ಪ್ರಗತಿ ದರ ಹಾಗೂ ಸೋಂಕಿತರ ಪೈಕಿ ಸಾವಿಗೀಡಾದವರ ದರ ಹೆಚ್ಚಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ದರ ದುಪ್ಪಟ್ಟಾಗಿದೆ. ಶನಿವಾರ ದೇಶಾದ್ಯಂತ 80,0092 ಪ್ರಕರಣಗಳು ದೃಢಪಟ್ಟಿದ್ದು, ವಾರಾಂತ್ಯದಲ್ಲಿ ಕಡಿಮೆ ತಪಾಸಣೆ ನಡೆಯುವ ಹಿನ್ನೆಲೆಯಲ್ಲಿ ಕಡಿಮೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದುವರೆಗೆ ವಾರಾಂತ್ಯದಲ್ಲಿ ಗರಿಷ್ಠ ಅಂದರೆ 63,851 ಪ್ರಕರಣಗಳು ಆಗಸ್ಟ್ 9ರಂದು ವರದಿಯಾಗಿದ್ದವು.

ಆತಂಕಕಾರಿ ವಿಚಾರವೆಂದರೆ ತಿಂಗಳ ಮೊದಲ ವಾರಗಳಲ್ಲಿ ಹೊಸ ಪ್ರಕರಣಗಳು ಹಾಗೂ ಪ್ರಗತಿ ದರ ಇಳಿಕೆ ಕಂಡುಬಂದಿದ್ದರೂ, ಕೊನೆಯ ವಾರ ಏರಿಕೆಯಾಗಿದೆ. ದೇಶದಲ್ಲಿ ಸತತ ಐದು ದಿನಗಳಿಂದ 76 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ವಾರದಲ್ಲಿ ಪ್ರಗತಿ ದರ 13.1% ಇದೆ. ಹಿಂದಿನ ವಾರ ದಾಖಲಾಗಿದ್ದ 4.7%ಕ್ಕೆ ಹೋಲಿಸಿದರೆ ಇದು ಮೂರು ಪಟ್ಟು. ಅದಕ್ಕಿಂತ ಹಿಂದಿನ ವಾರ 5.9% ಹಾಗೂ ಆಗಸ್ಟ್ ಮೊದಲ ವಾರ 10.9% ಪ್ರಗತಿದರ ದಾಖಲಾಗಿತ್ತು. ಅಂತೆಯೇ ಸತತ ನಾಲ್ಕನೇ ದಿನ ಸಾವಿರಕ್ಕೂ ಅಧಿಕ ಸಾವು ಸಂಭವಿಸಿದೆ. ಈ ವಾರ ಸಾವಿನ ಏರಿಕೆ ದರ ಶೇಕಡ 3.9ರಷ್ಟಿದ್ದು, ಹಿಂದಿನ ವಾರ ದಾಖಲಾದ ಶೇಕಡ 1.7ಕ್ಕೆ ಹೋಲಿಸಿದರೆ ಇದು ದ್ವಿಗುಣಗೊಂಡಿದೆ.
ಮಹಾರಾಷ್ಟ್ರ ಸತತ ಎರಡನೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಕಂಡಿದೆ. 16,408 ಮಂದಿಗೆ ಶನಿವಾರ ಸೋಂಕು ದೃಢಪಟ್ಟಿದ್ದು, ಉಳಿದಂತೆ ಉತ್ತರ ಪ್ರದೇಶ (6,233), ರಾಜಸ್ಥಾನ (1,450), ಮಧ್ಯಪ್ರದೇಶ (1,558), ಛತ್ತೀಸ್ಗಢ (1,471) ಮತ್ತು ಜಮ್ಮು ಮತ್ತು ಕಾಶ್ಮೀರ (786) ಹೀಗೆ ಐದು ರಾಜ್ಯಗಳು ಶನಿವಾರ ಇದುವರೆಗಿನ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ದೇಶದಲ್ಲಿ ರವಿವಾರ 970 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 64,550ಕ್ಕೇರಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm