ಬ್ರೇಕಿಂಗ್ ನ್ಯೂಸ್
31-08-20 12:36 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಆಗಸ್ಟ್ 31: ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ 80 ಸಾವಿರಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ರವಿವಾರ ವರದಿಯಾಗಿದ್ದು, ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಕೊರೊನದ ಇಷ್ಟೊಂದು ಪ್ರಕರಣಗಳು ಪತ್ತೆಯಾದ ನಿದರ್ಶನ ಇಲ್ಲ.
ಅಲ್ಪ ಇಳಿಕೆಯ ಬಳಿಕ ಪ್ರಗತಿ ದರ ಹಾಗೂ ಸೋಂಕಿತರ ಪೈಕಿ ಸಾವಿಗೀಡಾದವರ ದರ ಹೆಚ್ಚಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ದರ ದುಪ್ಪಟ್ಟಾಗಿದೆ. ಶನಿವಾರ ದೇಶಾದ್ಯಂತ 80,0092 ಪ್ರಕರಣಗಳು ದೃಢಪಟ್ಟಿದ್ದು, ವಾರಾಂತ್ಯದಲ್ಲಿ ಕಡಿಮೆ ತಪಾಸಣೆ ನಡೆಯುವ ಹಿನ್ನೆಲೆಯಲ್ಲಿ ಕಡಿಮೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದುವರೆಗೆ ವಾರಾಂತ್ಯದಲ್ಲಿ ಗರಿಷ್ಠ ಅಂದರೆ 63,851 ಪ್ರಕರಣಗಳು ಆಗಸ್ಟ್ 9ರಂದು ವರದಿಯಾಗಿದ್ದವು.

ಆತಂಕಕಾರಿ ವಿಚಾರವೆಂದರೆ ತಿಂಗಳ ಮೊದಲ ವಾರಗಳಲ್ಲಿ ಹೊಸ ಪ್ರಕರಣಗಳು ಹಾಗೂ ಪ್ರಗತಿ ದರ ಇಳಿಕೆ ಕಂಡುಬಂದಿದ್ದರೂ, ಕೊನೆಯ ವಾರ ಏರಿಕೆಯಾಗಿದೆ. ದೇಶದಲ್ಲಿ ಸತತ ಐದು ದಿನಗಳಿಂದ 76 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ವಾರದಲ್ಲಿ ಪ್ರಗತಿ ದರ 13.1% ಇದೆ. ಹಿಂದಿನ ವಾರ ದಾಖಲಾಗಿದ್ದ 4.7%ಕ್ಕೆ ಹೋಲಿಸಿದರೆ ಇದು ಮೂರು ಪಟ್ಟು. ಅದಕ್ಕಿಂತ ಹಿಂದಿನ ವಾರ 5.9% ಹಾಗೂ ಆಗಸ್ಟ್ ಮೊದಲ ವಾರ 10.9% ಪ್ರಗತಿದರ ದಾಖಲಾಗಿತ್ತು. ಅಂತೆಯೇ ಸತತ ನಾಲ್ಕನೇ ದಿನ ಸಾವಿರಕ್ಕೂ ಅಧಿಕ ಸಾವು ಸಂಭವಿಸಿದೆ. ಈ ವಾರ ಸಾವಿನ ಏರಿಕೆ ದರ ಶೇಕಡ 3.9ರಷ್ಟಿದ್ದು, ಹಿಂದಿನ ವಾರ ದಾಖಲಾದ ಶೇಕಡ 1.7ಕ್ಕೆ ಹೋಲಿಸಿದರೆ ಇದು ದ್ವಿಗುಣಗೊಂಡಿದೆ.
ಮಹಾರಾಷ್ಟ್ರ ಸತತ ಎರಡನೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಕಂಡಿದೆ. 16,408 ಮಂದಿಗೆ ಶನಿವಾರ ಸೋಂಕು ದೃಢಪಟ್ಟಿದ್ದು, ಉಳಿದಂತೆ ಉತ್ತರ ಪ್ರದೇಶ (6,233), ರಾಜಸ್ಥಾನ (1,450), ಮಧ್ಯಪ್ರದೇಶ (1,558), ಛತ್ತೀಸ್ಗಢ (1,471) ಮತ್ತು ಜಮ್ಮು ಮತ್ತು ಕಾಶ್ಮೀರ (786) ಹೀಗೆ ಐದು ರಾಜ್ಯಗಳು ಶನಿವಾರ ಇದುವರೆಗಿನ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ದೇಶದಲ್ಲಿ ರವಿವಾರ 970 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 64,550ಕ್ಕೇರಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm