ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.

ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm