ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.
ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm