ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.
ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.
ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm