ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.



ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm