ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm