ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.




ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm