ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm